ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದ ಬಿಜೆಪಿ ರಾಜ್ಯಪಾಲರ ಭೇಟಿ ದೂರು ಸಲ್ಲಿತ್ತು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಸಚಿವ ಬಿ.ನಾಗೇಂದ್ರ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ನಾನಿಂದಾಗಿ ಪಕ್ಷಕ್ಕೆ ಮುಜುಗರ ಆಗಬಾರದು. ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನ್ ಬರುತ್ತೋ ಕಾದು ನೋಡೋಣ.
ನನ್ನ ರಾಜೀನಾಮೆ ಸ್ವೀಕರಿಸಿ ಎಂದು ನಾಗೇಂದ್ರ ಸಿಎಂ ಮುಂದೆ ಆತ್ಮವಿಶ್ವಾಸದಿಂದ ಹೇಳಿದ್ದಾರೆ.
ಏನಿದು ಹಗರಣ :
ವಾಲ್ಮೀಕಿ ನಿಗಮದಿಂದ 94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್ ವಸಂತ ನಗರ ಶಾಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಅಲ್ಲಿಂದ ಹೈದರಬಾದ್ ನ ಫಸ್ಟ್ ಫೈನಾನ್ಸ್ ಕೋ ಅಪರೇಟಿವ್ ಸೊಸೈಟಿಗೆ ಸೇರಿದ 18 ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಇಗಾಗಲೇ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ತಂಡ ಸಚಿವ ಆಪ್ತನೊಬ್ಬನನ್ನು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ನಿಟ್ಟಿನಲ್ಲಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಗಳು ತೀವ್ರಗೊಂಡಿತ್ತು.
ಇದನ್ನೂ ಓದಿ : ದಾರಿ ದಾರಿಯಲ್ಲಿ… ಬೀದಿ ಬೀದಿಯಲ್ಲಿ ನನ್ನ ಮದುವೆ ಬಗ್ಗೆ ಕೇಳ್ತಾರೆ.. ಆದ್ರೆ ನಾನು ಮದುವೆ..? : ಡಾಲಿ ಧನಂಜಯ್..!