ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಾನನಷ್ಟ ಜಾಹಿರಾತು ಪ್ರಕರಣ ಸಂಬಂಧ ವಿಚಾರಣೆಗಾಗಿ ಕೋರ್ಟ್ ಮುಂದೆ ಹಾಜರಾಗಿದ್ದರು. ಇದೀಗ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನ ಶ್ಯೂರಿಟಿ ಆಗಿ ನೀಡಿದ್ದಾರೆ.
ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು.
ಇದನ್ನೂ ಓದಿ : ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮದ ಆರೋಪ – ಮರು ಪರೀಕ್ಷೆಗೆ ಆಗ್ರಹಿಸಿ ದೇಶಾದ್ಯಂತ ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್..!