ಬೆಂಗಳೂರು : ನಗರದಲ್ಲಿ ಕಳೆದ ಒಂದು ವಾರದಿಂದ ಸಂಜೆಯಾಗುತ್ತಿದ್ದಂತೆ ಭರ್ಜರಿ ಮಳೆ ಆಗುತ್ತಿದ್ದು, ನಿನ್ನೆ ಕೂಡ ಸಾಯಂಕಾಲ ಆಗುತ್ತಿದ್ದಂತೆ ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಭಾರಿ ಮಳೆಗೆ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ಕುಸಿದಿದೆ. ಈ ಹಿನ್ನಲೆ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.
ರಿಚಮಂಡ್ ಸರ್ಕಲ್ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತ : ನಿನ್ನೆ ಸುರಿದ ಮಳೆಗೆ ಮಳೆಯಿಂದ ರಿಚಮಂಡ್ ಸರ್ಕಲ್ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತವಾಗಿದ್ದು, ರಸ್ತೆ ಕೆಳಗಡೆ ಅಂಡರ್ಗ್ರೌಂಡ್ ಡ್ರೈನೇಜ್ ಇರುವ ಕಾರಣ ಮಳೆಯಾದರೆ ಇನ್ನೂ ರಸ್ತೆ ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಕೆಲಸ ಮುಗಿಸಿ ಮನೆಗೆ ತೆರಳುವವರಿಗೆ ಟ್ರಾಫಿಕ್ ಬಿಸಿ ತಟ್ಟಿದ್ದು, ರಸ್ತೆಯಲ್ಲಿಯೇ ಪರದಾಡುವಂತಾಗಿದೆ.
ಇದನ್ನೂ ಓದಿ : ತುಮಕೂರು : ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ..
Post Views: 93