ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಕೇಸ್ನಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿ 13 ಜನರನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಆದರೆ ದರ್ಶನ್ ಕೇಸ್ನಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ನಿನ್ನೆಯಿಂದಲೇ ಪೊಲೀಸರು 4 ಮಂದಿಯನ್ನ ಅರೆಸ್ಟ್ ಮಾಡಲು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳು ಕೊಟ್ಟ ಮಾಹಿತಿ ಮೇರೆಗೆ ನಾಲ್ವರಿಗಾಗಿ ಶೋಧ ನಡೆಸುತ್ತಿದ್ದು, ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು 13 ಮಂದಿಯನ್ನ ಬಂಧಿಸಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸರು ಆರೋಪಿಗಳಿಗೆ ಶೋಧ ಕಾರ್ಯ ನಡೆಸುತ್ತಿದ್ದು, ಒಂದು ಕೊಲೆ ಕೇಸ್ನಲ್ಲಿ ಇಷ್ಟೊಂದು ಆರೋಪಿಗಳಾ ಅನ್ನೊ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ.
ಕಿಡ್ನಾಪ್, ಕೊಲೆ, ಸಾಕ್ಷಿ ನಾಶ ಹೀಗೆ ಹಲವು ಆರೋಪ ಕೇಳಿಬಂದಿದ್ದು, ಪೊಲೀಸರು ಒಬ್ಬೊಬ್ಬರ ಪಾತ್ರವನ್ನ ಎಳೆ-ಎಳೆಯಾಗಿ ತನಿಖೆ ಮಾಡ್ತಿದ್ದಾರೆ. ಈಗಾಗಲೇ ಪೊಲೀಸರು ಪವಿತ್ರಾಗೌಡ A-1 ಆರೋಪಿ, ದರ್ಶನ್-A-2 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ : ದರ್ಶನ್ ಅರೆಸ್ಟ್ ಕೇಸ್ : ಪೊಲೀಸ್ ವಿಚಾರಣೆಯಲ್ಲಿ ಬಯಲಾಯ್ತು ಡೀಲ್ ರಹಸ್ಯ..!