ಚಿತ್ರದುರ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ 8ನೇ ಆರೋಪಿ DySP ಕಚೇರಿಗೆ ಬಂದು ಶರಣಾಗಿದ್ದಾನೆ. ದಂಡಿನ ಕುರುಬರಹಟ್ಟಿ ಗ್ರಾಮದ ರವಿ DySP ದಿನಕರ್ ಮುಂದೆ ಸರಂಡರ್ ಆದ ಆರೋಪಿ.
ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಹತ್ಯೆ ಕೃತ್ಯದಲ್ಲಿ ನಟ ದರ್ಶನ್ ಗ್ಯಾಂಗ್ನ 17 ಮಂದಿ ಪಾಲ್ಗೊಂಡಿದ್ದು, ತಪ್ಪಿಸಿಕೊಂಡಿರುವ ಇನ್ನೂ ನಾಲ್ವರ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ರವಿ ಬಾಡಿಗೆ ಕಾರಿನಲ್ಲೇ ಹಂತಕರು ಕಿಡ್ನಾಪ್ ಮಾಡಿದ್ದರು. ಬಾಡಿಗೆ ಇದೆ ಎಂದು ರವಿಗೆ ನಂಬಿಸಿ ರಘು & ಟೀಂ ಕರೆದೊಯ್ದಿದ್ದರು. ಆದರೆ ಕೊಲೆ ಪ್ರಕರಣ ಬಯಲಾಗುತ್ತಿದ್ದಂತೆ ಗಾಬರಿಗೊಂಡಿದ್ದ ರವಿ ಪೊಲೀಸರ ಮುಂದೆ ಶರಣಾಗಿದ್ದಾನೆ.
ಇದನ್ನೂ ಓದಿ : ನಟ ದುನಿಯಾ ವಿಜಯ್ ವಿಚ್ಛೇದನ ಕೋರಿದ ಅರ್ಜಿ ವಜಾ..!
Post Views: 116