ಬೆಂಗಳೂರು : ನಟ ದರ್ಶನ್ ಆ್ಯಂಡ್ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಮಾನುಷವಾಗಿ ಹತ್ಯೆ ಮಾಡಿದ ಕೇಸ್ ಸದ್ಯ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಸೇರಿದಂತೆ 14 ಮಂದಿಯನ್ನು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಂತೆಯೇ ಈ ಪ್ರಕರಣ ಸಂಬಂಧ ಚಲನಚಿತ್ರ ಮಂಡಳಿ ನಿನ್ನೆ ಮಹತ್ವದ ಸಭೆ ನಡೆಸಿದ್ದು, ನಟ ದರ್ಶನ್ರನ್ನ ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡ್ಬೇಕಾ? ಬೇಡ್ವಾ ಎಂದು ಫಿಲ್ಮ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ನೇತೃತ್ವದಲ್ಲಿ ಮೀಟಿಂಗ್ ನಡೆಸಿದೆ.
ಸಭೆ ಬಳಿಕ ಫಿಲ್ಮ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ಮಾತನಾಡಿ, “ದರ್ಶನ್ ವಿರುದ್ಧ ಇನ್ನೂ ಎರಡ್ಮೂರು ದಿನದಲ್ಲಿ ಮಹತ್ವದ ನಿರ್ಧಾರ ಕೈಗೊಳುತ್ತೇವೆ. ಅಲ್ದೇ ಡಿ ಬಾಸ್ ಫ್ಯಾನ್ಸ್ಗೂ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಕೆಟ್ಟ ಕಾಮೆಂಟ್, ಪೋಸ್ಟ್ ಹಾಕದಂತೆ ಎಚ್ಚರಿಸಿದರು.
ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಕೊಲೆ ಪ್ರಕರಣ ಇದ್ದಾಗ ನಾವು ಎಂಟ್ರಿ ಆಗಲು ಆಗುವುದಿಲ್ಲ. 2011 ರಲ್ಲಿ ಸರಿದೂಗಿಸಿದ್ದೆವು. ಅದು ಕುಟುಂಬದ ವಿಚಾರವಾಗಿತ್ತು. ಈಗ ನಾವು ಎಂಟ್ರಿಯಾಗಲು ಸಾಧ್ಯವಿಲ್ಲ. ಕಾನೂನಿನ ತೀರ್ಪು ಬಂದಾಗ ಕೂಡಲೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ದರ್ಶನ್ ಅವರ ಒಂದು ಸಿನಿಮಾ ಅರ್ಧಕ್ಕೆ ನಿಂತಿದೆ. ಐದಾರು ತಿಂಗಳು ದರ್ಶನ್ ಪ್ರಕರಣದಿಂದ ಹೊರ ಬರಲು ಸಾಧ್ಯವಿಲ್ಲ. ಮುಂದೆ ಸಿನಿಮಾಗಳೂ ಘೋಷಣೆ ಆಗಿದೆ. ಕೆಲವರು ಅಡ್ವಾನ್ಸ್ ಕೊಟ್ಟಿದ್ದಾರೆ. ಹೀಗಾಗಿ ಬ್ಯಾನ್ ಅಷ್ಟು ಸುಲಭವಲ್ಲ. ನಾವು ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಆದ್ರೆ ಪ್ರಕರಣ ತನಿಖೆ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ, ಹತ್ಯೆಗೀಡಾದ ರೇಣುಕಾಸ್ವಾಮಿ ಮನೆಗೆ ಜೂ.14 ರಂದು ಫಿಲ್ಮ್ ಚೇಂಬರ್ನ ಸದಸ್ಯರು ಭೇಟಿ ನೀಡಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಶುರು..!