Download Our App

Follow us

Home » ರಾಜಕೀಯ » ಬಿಜೆಪಿ ವರಿಷ್ಠ BSY ಮೇಲೆ ರಾಜಕೀಯ ವೈಷಮ್ಯ ಪ್ರದರ್ಶಿಸಲಾಗ್ತಿದೆ : ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ..!

ಬಿಜೆಪಿ ವರಿಷ್ಠ BSY ಮೇಲೆ ರಾಜಕೀಯ ವೈಷಮ್ಯ ಪ್ರದರ್ಶಿಸಲಾಗ್ತಿದೆ : ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ..!

ಬೆಂಗಳೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ, ಇದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತದ ದುರುಪಯೋಗದಿಂದ ಷಡ್ಯಂತ್ರ ಮಾಡಿದೆ. ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ, ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್​​ಗಳನ್ನು ದಾಖಲಿಸಿದ್ದಾಳೆ ಎಂದು ಟ್ವೀಟ್ ಮಾಡಿದ್ದಾರೆ.

ಇದರ ಬಗ್ಗೆ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು, ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲು 81 ವರ್ಷದ ಬಿಜೆಪಿ ವರಿಷ್ಠರ ಬಿಎಸ್​​​ವೈ ಮೇಲೆ ರಾಜಕೀಯ ವೈಶಮ್ಯ ಮಾಡ್ತಿದೆ. ಈ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಪೋಸ್ಟ್‌ಮಾರ್ಟಮ್ ರಿಪೋರ್ಟ್‌ನಲ್ಲಿ ಬಯಲಾಯ್ತು ದರ್ಶನ್​​ ಗ್ಯಾಂಗ್​​​​ನ ರಾಕ್ಷಸ ಅಟ್ಟಹಾಸ..!

Leave a Comment

DG Ad

RELATED LATEST NEWS

Top Headlines

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ನಟಿ..!

ಬಿಗ್ ಬಾಸ್, ಅತ್ಯಂತ ಜನಪ್ರಿಯ ಕಾರ್ಯಕ್ರಮ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಅನ್ನು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ

Live Cricket

Add Your Heading Text Here