Download Our App

Follow us

Home » ಅಪರಾಧ » ಡಿ ಬಾಸ್ ಹೆಸರಿನಲ್ಲಿ ಪುಂಡತನ ಮೆರೆದ ಕಿರಾತಕ ಅಭಿಮಾನಿಯ ಒದ್ದು ಒಳಗೆ ಹಾಕಿದ ಯಾದಗಿರಿ ಪೊಲೀಸರು..!

ಡಿ ಬಾಸ್ ಹೆಸರಿನಲ್ಲಿ ಪುಂಡತನ ಮೆರೆದ ಕಿರಾತಕ ಅಭಿಮಾನಿಯ ಒದ್ದು ಒಳಗೆ ಹಾಕಿದ ಯಾದಗಿರಿ ಪೊಲೀಸರು..!

ಯಾದಗಿರಿ : ನಟ ದರ್ಶನ್ ಅಭಿಮಾನಿಯಿಂದ ಯುವಕನಿಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಯಾದಗಿರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಜು ಬಂಧಿತ ಆರೋಪಿ.

ಯಾದಗಿರಿಯ ಗಂಗಾನಗರದ ಪಂಚರ್ ಅಂಗಡಿ ಯುವಕ ಅಭಿ ಎಂಬಾತನಿಗೆ ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಜು ಕೊಲೆ ಬೆದರಿಕೆ ಹಾಕಿದ್ದನು. ಬಾಸ್ ಬಾಸ್ ಎಂದು ಯಾಕೆ ಬಕೆಟ್‌ ಹಿಡಿಯುತ್ತಿರಿ? ಬಕೆಟ್ ಯಾಕ್ ಹಿಡಿತೀರಿ. ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಅಭಿ ಇ‌ನ್ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದನು.

ಹೀಗಾಗಿ ಅಭಿಗೆ ಕಾಲ್ ಮಾಡಿ ಜೀವಂತವಾಗಿ ಸುಡೋದಾಗಿ ರಾಜು ಬೆದರಿಸಿದ್ದ. ನಿನ್ನ ಮನೆ ಹಾಗೂ ಅಂಗಡಿಗೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಕರೆ ಮಾಡಿ ಹೆದರಿಸಿದ್ದನು. ಇನ್ನು ಆಡಿಯೋ ವೈರಲ್ ಆಗ್ತಿದ್ದಂತೆ ಯಾದಗಿರಿ ನಗರ ಠಾಣೆಯ ಪೊಲೀಸರು ಅಲರ್ಟ್ ಆಗಿ ರಾಜುನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ :ರಾಜ್ಯದ ವಾಹನ ಸವಾರರಿಗೆ ಬಿಗ್​​​ಶಾಕ್ : ಪೆಟ್ರೋಲ್ – ಡೀಸೆಲ್ ತೆರಿಗೆ ಹೆಚ್ಚಿಸಿದ ರಾಜ್ಯ ಸರಕಾರ, ದರ ಭಾರೀ ಏರಿಕೆ..! 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here