ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ & ಗ್ಯಾಂಗ್ ಅನ್ನು ನಿನ್ನೆ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರು ಡಿ ಗ್ಯಾಂಗ್ನ ಕರಾಳ ಮುಖವನ್ನ ಬಿಚ್ಚಿಟ್ಟಿದ್ದಾರೆ.
ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ರೀತಿ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ರೇಣುಕಾಸ್ವಾಮಿಗೆ ಡಿ ಗ್ಯಾಂಗ್ ಕೊಟ್ಟ ಟಾರ್ಚರ್ ಅಷ್ಟಿಷ್ಟಲ್ಲ, A-5 ನಂದೀಶ್ ಮತ್ತು A-14 ಪ್ರದೋಶ್ ರೇಣುಕಾಸ್ವಾಮಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಅಷ್ಟೆ ಅಲ್ಲದೆ ಕರೆಂಟ್ ಶಾಕ್ ನೀಡಿ ಹಿಂಸೆ ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ.
ಕರೆಂಟ್ ಶಾಕ್ಗೆ ಬಳಸಿದ ವಸ್ತು ವಶಪಡಿಸಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಹೀಗಾಗಿ ಪೊಲೀಸರು ಮತ್ತೆ 5 ದಿನ ಕಸ್ಟಡಿಗೆ ಪಡೆದಿದ್ದಾರೆ. ಪ್ರಕರಣದ ಇಂಚಿಂಚೂ ಮಾಹಿತಿ ಕಲೆ ಹಾಕಲು ಪೊಲೀಸರ ಪ್ಲ್ಯಾನ್ ಮಾಡಿದ್ದಾರೆ. ಎಲ್ಲಾ ಮಾಹಿತಿ ಕಲೆಹಾಕಿ ಚಾರ್ಜ್ಶೀಟ್ ತಯಾರಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕೊ*ಲೆ ಕೇಸ್ : ದರ್ಶನ್ ಗ್ಯಾಂಗ್ನ್ನು ಇಂದು ಮೈಸೂರಿಗೆ ಕರೆದೊಯ್ಯಲು ಸಿದ್ದತೆ..!