ಕೋಲಾರ : ಪಾದಚಾರಿ ದಂಪತಿ ಮೇಲೆ ಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕಹಳ್ಳಿ ಗ್ರಾಮದ ರಾಮಕ್ಕ ಮೃತಪಟ್ಟಿದ್ದಾರೆ. ಹಾಗೂ 62 ವರ್ಷದ ಶ್ರೀನಿವಾಸ ಅವರಿಗೆ ಗಂಭೀರ ಗಾಯಗಳಾಗಿದ್ದು, ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಪಾದಚಾರಿಗಳು ವೈಯಕ್ತಿಕ ಕೆಲಸದ ನಿಮಿತ್ತ ನಗರಕ್ಕೆ ಬಂದಾಗ, ಇಲ್ಲಿನ ತಾಲೂಕು ಕಚೇರಿ ಸಮೀಪದಲ್ಲಿ ಸಿಗ್ನಲ್ ದಾಟುವ ವೇಳೆ ಬಸ್ ಚಾಲಕನ ಅಚಾತುರ್ಯದಿಂದ ಈ ದುರ್ಘಟನೆ ಸಂಭವಿಸಿದೆ.
ಈ ಘಟನೆ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಡ್ರೈವರ್ ಹಾಗೂ ಬಸ್ನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ತುಮಕೂರು ರಸ್ತೆ ಎಲಿವೇಟೆಡ್ ಫ್ಲೈ ಓವರ್ ಮೂರು ದಿನ ಬಂದ್..!
Post Views: 1,295