ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇನ್ನೂ 19 ಮಂದಿ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದರ್ಶನ್, ಕೊಲೆ ಪ್ರಕರಣದಲ್ಲಿ ಜೈಲು ಸೇರುತ್ತಿದ್ದಂತೆ ಅವರ ಆಪ್ತರು, ಕುಟುಂಬದವರು ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ.
ದರ್ಶನ್ರ ಸಹೋದರ ಆಗಲಿ, ತಾಯಿಯಾಗಲಿ ಠಾಣೆಗೆ ಭೇಟಿ ನೀಡಿಲ್ಲ. ಇನ್ನು ಪತ್ನಿ ವಿಜಯಲಕ್ಷ್ಮಿ ದರ್ಶನ್ ಬಂಧನ ಆದ ದಿನವೇ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನೇ ಡಿ-ಆಕ್ಟಿವೇಟ್ ಮಾಡಿದ್ದರು. ಆದರೆ ಈಗ ಮತ್ತೆ ಆಕ್ಟಿವ್ ಮಾಡಿದ್ದಾರೆ. ಇನ್ನು ತಾವು ಮಾಡಿದ್ದ ಎಲ್ಲ ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್ಫಾಲೋ ಮಾಡಿ ಹೊಸ ಟ್ವಿಸ್ಟ್ ನೀಡಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿದ ಮೇಲೆ ಹಳೆಯ ಹೆಸರನ್ನೇ ಮುಂದುವರೆಸಿದ್ದಾರೆ. ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸಾಕಷ್ಟು ಜನ ಅವರ ಹೆಸರಿಗೆ ಟ್ಯಾಗ್ ಮಾಡಿದ ವಿಡಿಯೋಗಳು ಮಾತ್ರ ಉಳಿದುಕೊಂಡಿವೆ. ಇದನ್ನು ನೋಡಿದ ಅಭಿಮಾನಿಗಳಲ್ಲಿ ಈ ಪ್ರಕರಣದ ಬಗ್ಗೆ ವಿಜಯಲಕ್ಷ್ಮಿ ಇನ್ಸ್ಟಾ ಖಾತೆಯಲ್ಲಿ ಮಾಹಿತಿ ನೀಡುತ್ತಾರೆಯೇ ಎಂಬ ಕುತೂಹಲ ಮೂಡಿದೆ.
ಇದನ್ನೂ ಓದಿ : ದರ್ಶನ್ ಅರೆಸ್ಟ್ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣನಿಗೂ ಶುರುವಾಯ್ತು ಭೀತಿ – ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್..!