Download Our App

Follow us

Home » ಸಿನಿಮಾ » ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು ರಿಲೀಸ್​..!

ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು ರಿಲೀಸ್​..!

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ”. ಈಗಾಗಲೇ ಸುಂದರ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಗಗನ್ ಬಡೇರಿಯಾ ಅವರು ಸಂಗೀತ ಸಂಯೋಜಿಸಿರುವ ಆರು‌ ಹಾಡುಗಳಿದೆ. ಆ ಪೈಕಿ ಚಿತ್ರದ ಮೊದಲ ಇಂಪಾದ ಹಾಡು “ಓ ಅನಾಹಿತ” ಜೂನ್ 21ರಂದು ಬಿಡುಗಡೆಯಾಗಲಿದೆ.

ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಅವರೆ ಈ ಹಾಡನ್ನು ಬರೆದಿದ್ದು, ಮೂಲ ಸಂಯೋಜನೆಯನ್ನು ಮಾಡಿದ್ದಾರೆ. “ಮಾನ್ಸೂನ್ ರಾಗ”ದ ಖ್ಯಾತಿಯ ದೀಕ್ಷಿತ್ ಈ‌ ಗೀತೆಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. “ಸಪ್ತ ಸಾಗರ” ಖ್ಯಾತಿಯ ಕಪಿಲ್ ಕಪಿಲನ್ ಈ ಹಾಡನ್ನು ಹಾಡಿದ್ದಾರೆ. ಜೂನ್ 21ರಂದು ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡಿನ ಬರುವಿಕೆಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

“ಕಿರಿಕ್ ಪಾರ್ಟಿ” ಹಾಗೂ “ಅವನ್ನೇ ಶ್ರೀ ಮನ್ನಾರಾಯಣ” ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್ ಅವರ “ಸೆವೆನ್ ಓಡ್ಸ್ ” ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗು “ಕಥಾ ಸಂಗಮ” ಚಿತ್ರದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಈಗ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರವನ್ನು ನಿರ್ದೇಶಿಸಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ.

“ಪಂಚತಂತ್ರ”ದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ವಿಹಾನ್ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.ಕಿರುತೆರೆಯ ಮೂಲಕ. ಜನಮನಸೂರೆಗೊಂಡಿರುವ ಅಂಕಿತ ಅಮರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಸೂಪರ್ ಹಿಟ್ ” ಗೀತಾಂಜಲಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ (ನ್ಯೂಯಾರ್ಕ್ ಫಿಲಂ ಅಕಾಡೆಮಿ ಹಾಗು ಆಸ್ಕರ್ ಗೋಲ್ಡ್ ರೈಸಿಂಗ್ ಪ್ರೋಗ್ರಾಮ್ ನಿಂದ ತರಬೇತಿ) ಹಾಗೂ ರಕ್ಷಿತ್ ಕಾಪ್ ಅವರ ಸಂಕಲನವಿರುವ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ VFX ಪಿನಾಕ ಸ್ಟುಡಿಯೋದಲ್ಲಿ ನಡೆದಿದೆ. ಶಶಿಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪರಂವಃ ಸ್ಟುಡಿಯೋಸ್ ಸಿ.ಯಿ.ಓ ಆಗಿ ಶ್ರೀನೀಶ್ ಶೆಟ್ಟಿ ಇದ್ದಾರೆ.

ಇದನ್ನೂ ಓದಿ : ಸಂತ್ರಸ್ತೆ ಕಿಡ್ನಾಪ್​ ಕೇಸ್ – ಇಂದು ಹೈಕೋರ್ಟ್​ನಲ್ಲಿ ಭವಾನಿ ರೇವಣ್ಣ ಬೇಲ್​​ ಭವಿಷ್ಯ ನಿರ್ಧಾರ..!

 

 

 

 

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here