ಬೆಂಗಳೂರು : ನಟ ದರ್ಶನ್ ಗ್ಯಾಂಗ್ನಿಂದ ನಡೆದ ರೇಣುಕಾಸ್ವಾಮಿ ಭೀಕರ ಹತ್ಯೆ ಕೇಸ್ನಲ್ಲಿ, ರಾಜಕಾಲುವೆ ಪಾಲಾಗಿರುವ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘವೇಂದ್ರ ಮೊಬೈಲ್ಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ಬಗ್ಗೆ ಮಹತ್ವದ ಸಾಕ್ಷಿಗಳನ್ನು ಇದು ಹೊಂದಿದ್ದು, ಇದೀಗ ಶೋಧಕ್ಕಾಗಿ ಅಗ್ನಿಶಾಮಕ ದಳದ ಮೊರೆ ಹೋಗಲಾಗಿದೆ.
ಸತತ 11 ದಿನಗಳಿಂದ ಮೃತ ರೇಣುಕಾಸ್ವಾಮಿ ಮೊಬೈಲ್ಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಜೂನ್ 8ರಂದು ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ಜೂನ್ 9ರ ಮುಂಜಾನೆ ಮೃತ ರೇಣುಕಾಸ್ವಾಮಿ ಹಾಗೂ A5 ಆರೋಪಿ ರಾಘವೇಂದ್ರ ಇಬ್ಬರ ಮೊಬೈಲ್ ಅನ್ನು ಪಡೆದು ಸುಮನಹಳ್ಳಿಯ ರಾಜಕಾಲುವೆ ಬಳಿ ಪ್ರದೂಷ್ ಬಿಸಾಡಿದ್ದ.
ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಮೇಲೆ ನಡೆಸಲಾದ ಹಲ್ಲೆಯನ್ನು ಈ ಮೊಬೈಲ್ಗಳಲ್ಲಿ ಆರೋಪಿಗಳು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘವೇಂದ್ರರ ಮೊಬೈಲ್ಗಳು ಪ್ರಮುಖ ಸಾಕ್ಷಿಯಾಗಿವೆ. ಇಬ್ಬರ ಮೊಬೈಲ್ಗಳನ್ನೂ ರಾಜಕಾಲುವೆಗೆ ಬಿಸಾಡಿದ್ದಾಗಿ ಪ್ರದೂಶ್ ಹೇಳಿಕೆ ನೀಡಿದ್ದಾನೆ.
ಆತ ತೋರಿಸಿದ ಸುಮನಹಳ್ಳಿ ರಾಜಕಾಲುವೆಯ ಬಳಿ ಪೋಲಿಸ್ ಅಧಿಕಾರಿಗಳು ಮಹಜರು ನಡೆಸಿದ್ದಾರೆ. ಬಿಬಿಎಂಪಿ ಪೌರ ಕಾರ್ಮಿಕರ ಸಹಾಯದಿಂದ ರಾಜಕಾಲುವೆಯಲ್ಲಿ ಮೊಬೈಲ್ ಹುಡುಕಾಡಿಸಿದ್ದಾರೆ. ಆದರೆ ಪತ್ತೆಯಾಗಿಲ್ಲ. ಹೀಗಾಗಿ ಮೊಬೈಲ್ ಪತ್ತೆ ಮಾಡಿಕೊಡುವಂತೆ ಪೊಲೀಸರು ಅಗ್ನಿಶಾಮಕ ಠಾಣೆ ಅಧಿಕಾರಿಗಳಿಗೆ ಮೊರೆ ಹೋಗಿದ್ದಾರೆ.
ಇದನ್ನೂ ಓದಿ : ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ..!