ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿ – ಪುನೀತ್ ಕೆರೆಹಳ್ಳಿಯನ್ನು ಮತ್ತೆ ಜೈಲಿಗಟ್ಟಿದ ಪೊಲೀಸರು!

ಬೆಂಗಳೂರು : ಅಪರಾಧ ಕೃತ್ಯಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿರುವ ಆರೋಪದಡಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಪುನೀತ್ ಅವರು ಇದುವರೆಗೂ 14 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ದ ಬಿಎನ್‌ಎಸ್ಎಸ್ ಸೆಕ್ಷನ್ 127ರ ಅಡಿ ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಎದುರು ಹಾಜರು ಪಡಿಸಲಾಗಿತ್ತು.

ಇನ್ನ ಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿಯವರು ಆರೋಪಿ ಪುನೀತ್‌ಗೆ ಸೂಚನೆ ನೀಡಿದ್ದರು. ಆದರೆ, ಪುನೀತ್ ಕೆರೆಹಳ್ಳಿ  ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ : 75 ಸಾವಿರ ಲಂಚಕ್ಕೆ ಬೇಡಿಕೆ – ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಕರ್ಮಷಿಯಲ್ ಟ್ಯಾಕ್ಸ್ ಅಧಿಕಾರಿ ರಾಮಾನುಜ!

Btv Kannada
Author: Btv Kannada

Read More