ಬೆಂಗಳೂರು : ವೇಗವಾಗಿ ಬಂದ ಪಿಕಪ್ ವಾಹನ ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಈ ಅಪಘಾತ ನಿನ್ನೆ ಸುಮಾರು ಮಧ್ಯಾಹ್ನ 2.30 ಕ್ಕೆ ನಡೆದಿದೆ.
ಘಟನೆಯಲ್ಲಿ ಓರ್ವನ ಕಾಲು ಮುರಿದು ಹೋಗಿದ್ದು, ಅಪಘಾತದ ವೇಳೆ ಫುಟ್ಪಾತ್ ಪಕ್ಕದಲ್ಲಿ ಗಾಡಿ ನಿಲ್ಲಿಸಿಕೊಂಡು ನಿಂತಿದ್ದ ವಾಹನ ಸವಾರ. ಈ ವೇಳೆ ಪಿಕಪ್ ವಾಹನ ಬೈಕ್ ಸವಾರನಿಗೆ ಗುದ್ದಿ ಅಂಗಡಿಗೆ ನುಗ್ಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗ ಮೀತಿ ಮೀರಿದ್ದರಿಂದ ಈ ಅಪಘಾತ ಸಂಭವಿಸಿದೆ.
ಈ ಘಟನೆಯ ದೃಶ್ಯ ಸಿಸಿಟಿವಿಯಯಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಘಟನೆ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹೆಚ್ಡಿ ಕುಮಾರಸ್ವಾಮಿಗೆ ನಿಂದಿಸಿದ ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಮುಖಂಡರಿಂದ ದೂರು..!
Post Views: 132