ಟಿ20 ವಿಶ್ವಕಪ್ನ ಸೂಪರ್ 8ರಲ್ಲಿ ಬಾಂಗ್ಲಾ ವಿರುದ್ಧ ಭಾರತ ರೋಚಕ ಗೆಲುವು ಸಾಧಿಸಿದೆ. ಬರೋಬ್ಬರಿ 50 ರನ್ಗಳ ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ರೋಹಿತ್ ಪಡೆ ಟಿ20 ವಿಶ್ವಕಪ್ ಸೆಮಿಫೈನಲ್ನತ್ತ ದಾಪುಗಾಲಿಟ್ಟಿದೆ. ಸೂಪರ್ 8 ಸುತ್ತಿನಲ್ಲಿ ಭಾರತ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಷ್ಟೇ ಇಲ್ಲದೆ ಈ ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್ ರನ್ರೇಟ್ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್ಗೇರುವುದು ಖಚಿತವಾಗಿದೆ.
ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂಯಲ್ಲಿ ನಿನ್ನೆ ನಡೆದ ಭಾರತ ಹಾಗೂ ಬಾಂಗ್ಲಾದೇಶ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ಗಿಳಿದ ಭಾರತ 5 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತ್ತು. ಭಾರತದ ಪರ ಹಾರ್ದಿಕ್ ಪಾಂಡ್ಯ 50 ರನ್ ಸಿಡಿಸಿ ಗಮನ ಸೆಳೆದಿದ್ದರು. 197ರನ್ಗಳ ಟಾರ್ಗೆಟ್ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಭಾರತದ ಬೌಲರ್ಗಳು ಬಿಗ್ ಶಾಕ್ ಕೊಟ್ಟರು. ಬ್ಯಾ
ಕ್ ಟು ಬ್ಯಾಕ್ ವಿಕೆಟ್ಗಳನ್ನು ಕಳೆದುಕೊಂಡ ಬಾಂಗ್ಲಾ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ಕುಲ್ದೀಪ್ ಯಾದವ್ 3, ಹರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದು ಬಾಂಗ್ಲಾ ಬ್ಯಾಟ್ಸ್ಮನ್ಗಳ ಓಟಕ್ಕೆ ಕಡಿವಾಣ ಹಾಕಿದರು. ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನ ಹಾಗೂ ಭಾರತ ತಂಡದ ಉತ್ತಮ ಬೌಲಿಂಗ್ನಿಂದ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 146 ರನ್ ಸಿಡಿಸಿ ಸೊಲ್ಲೊಪ್ಪಿಕೊಂಡಿತು.
ಇದನ್ನೂ ಓದಿ : ಈ ತರ ಮಾಡಿದ್ಮೇಲೆ ಯಾರು ಅವ್ರ ಪರ ನಿಲ್ತಾರೆ, ಯಾರು ನಿಲ್ಲಲ್ಲ – ದರ್ಶನ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಏನಂದ್ರು ನೋಡಿ..!