ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ. ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ನಲ್ಲಿ ನಾಳೆ ಕೇಜ್ರಿ ಅರ್ಜಿ ವಿಚಾರಣೆ ನಡೆಯಲಿದೆ. ಸುಪ್ರೀಂಕೋರ್ಟ್ನಲ್ಲಿ ಕೇಜ್ರಿವಾಲ್ಗೆ ರಿಲೀಫ್ ಸಿಗುತ್ತಾ..? ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕುತ್ತಾ ಅನ್ನೋ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.
ಇದನ್ನೂ ಓದಿ : ರಾಜಕಾರಣದಲ್ಲಿ ನನಗಿಂತ ಹೆಚ್ಡಿಕೆ ಚಿಕ್ಕವರು : ಡಿಸಿಎಂ ಡಿಕೆಶಿ..!