Download Our App

Follow us

Home » ಸಿನಿಮಾ » ಮತ್ತೆ ಬರಲಿದೆ ‘ನಾ ನಿನ್ನ ಬಿಡಲಾರೆ’ ಚಿತ್ರ : ಹಾರರ್ ಸಿನಿಮಾದ ನಿರ್ದೇಶನಕ್ಕಿಳಿದ ಹೇಮಂತ್ ಹೆಗಡೆ..!

ಮತ್ತೆ ಬರಲಿದೆ ‘ನಾ ನಿನ್ನ ಬಿಡಲಾರೆ’ ಚಿತ್ರ : ಹಾರರ್ ಸಿನಿಮಾದ ನಿರ್ದೇಶನಕ್ಕಿಳಿದ ಹೇಮಂತ್ ಹೆಗಡೆ..!

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹೇಮಂತ್ ಹೆಗಡೆ “ನಾ ನಿನ್ನ ಬಿಡಲಾರೆ” ಚಿತ್ರವನ್ನು ನಿರ್ದೇಶಿಸಿ, ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. “ನಾ ನಿನ್ನ ಬಿಡಲಾರೆ” ಚಿತ್ರದ ಮುಹೂರ್ತ ಸಮಾರಂಭ ಪದ್ಮನಾಭನಗರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಹೇಮಂತ್ ಹೆಗಡೆ ಅವರು, ಇದೊಂದು ಹಾರಾರ್‌ ಜಾನರ್ ನ ಚಿತ್ರ. ಈ ಸೂಪರ್ ಹಿಟ್ ಚಲನಚಿತ್ರದ ಶೀರ್ಷಿಕೆ ನಮ್ಮ ಚಿತ್ರದ ಕಥೆಗೆ ಸೂಕ್ತವಾಗಿದೆ. ಹಾಗಾಗಿ “ನಾ ನಿನ್ನ ಬಿಡಲಾರೆ” ಶೀರ್ಷಿಕೆ ಇಟ್ಟಿದ್ದೇವೆ. ಆದರೆ ಹಳೆಯ “ನಾ ನಿನ್ನ ಬಿಡಲಾರೆ” ಚಿತ್ರದ ಕಥೆಯೇ ಬೇರೆ. ಈ ಚಿತ್ರದ ಕಥೆಯೇ ಬೇರೆ. ಕನ್ನಡದಲ್ಲಿ ಒಂದೊಳ್ಳೆ ಹಾರಾರ್ ಚಿತ್ರ ಬಂದು ಬಹಳ ಸಮಯವಾಗಿದೆ. ಹಾಗಾಗಿ ಹಾರಾರ್ ಜಾನರ್ ಅನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಹೊಸನಗರದ ಬಳಿ ನೂರೈವತ್ತು ವರ್ಷಗಳ ಹಳೆಯ ಮನೆಯಲ್ಲೇ ಮೂವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ನನ್ನ ಹೆಂಡತಿ ಪಾತ್ರದಲ್ಲಿ ಅಪೂರ್ವ ನಟಿಸುತ್ತಿದ್ದಾರೆ. ಭಾವನಾ ರಾಮಣ್ಣ ಅವರು ದೆವ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಶೋರ್, ಮಕರಂದ್ ದೇಶಪಾಂಡೆ, ಶಂಕರ್ ಅಶ್ವಥ್, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ರೇವಣ್ಣ ಸಿದ್ದಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟ ನಾಜರ್ ಅವರ ಜೊತೆ ಕೂಡ ಮಾತುಕತೆ ನಡೆಯುತ್ತಿದೆ‌. ಮೂರು ಹಾಡುಗಳಿದ್ದು ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ಕೃಷ್ಣ ಬಂಜನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ “ಘೋಸ್ಟ್ 2.0” ಎಂಬ ಅಡಿಬರಹವಿದೆ.

ನನ್ನದು ಈ ಚಿತ್ರದಲ್ಲಿ ಮಧ್ಯಮ ವಯಸ್ಸಿನ ಮಲೆನಾಡ ಬ್ರಾಹ್ಮಣ ಹೆಂಗಸಿನ ಪಾತ್ರ. ನಾನು ಹುಟ್ಟಿಬೆಳೆದಿದ್ದು ಶಿವಮೊಗ್ಗದ ಬ್ರಾಹ್ಮಣರ ವಠಾರದಲ್ಲಿ. ಹಾಗಾಗಿ ನನಗೆ ಈ ಪಾತ್ರ ತುಂಬಾ ಹತ್ತಿರವಾಯಿತು ಎಂದರು ನಟಿ ಭಾವನ ರಾಮಣ್ಣ.

ಶಂಕರ್ ಅಶ್ವಥ್, ಸುಚೇಂದ್ರ ಪ್ರಸಾದ್, ರೇವಣ್ಣ ಸಿದ್ದಯ್ಯ ಮುಂತಾದವರು “ನಾ ನಿನ್ನ ಬಿಡಲಾರೆ” ಚಿತ್ರದ ಕುರಿತು ಮಾತನಾಡಿದರು. ಅನ್ವಿತಾ ಆರ್ಟ್ಸ್ ಲಾಂಛನದಲ್ಲಿ ಶಶಿಕಿರಣ್ ರಂಗನಾಥ್, ಕಿರಣ್ ನಾಗರಾಜ್ ಹಾಗೂ ಬಾಲಕೃಷ್ಣ ಪೆರುಂಬಲ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ : ‘ನಾಟ್ ಔಟ್’ ಚಿತ್ರದ ನಾಯಕನಿಗೆ ಹುಟ್ಟುಹಬ್ಬದ ಸಂಭ್ರಮ : ವಿಶೇಷ ಟೀಸರ್ ರಿಲೀಸ್ ಮಾಡಿ ಶುಭಾಶಯ ಕೋರಿದ ಚಿತ್ರತಂಡ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here