Download Our App

Follow us

Home » ಸಿನಿಮಾ » ಪುನೀತ್ ರಾಜ್‌ಕುಮಾರ್ ಆತ್ಮದ ಜೊತೆಗೆ ರಾಮಚಂದ್ರ ಗುರೂಜಿ ಮಾತುಕತೆ – ಮಗಳ ಹೊಟ್ಟೆಯಲ್ಲಿ ಹುಟ್ಟಿ ಬರುತ್ತೇನೆ ಎಂದ ಅಪ್ಪು..!

ಪುನೀತ್ ರಾಜ್‌ಕುಮಾರ್ ಆತ್ಮದ ಜೊತೆಗೆ ರಾಮಚಂದ್ರ ಗುರೂಜಿ ಮಾತುಕತೆ – ಮಗಳ ಹೊಟ್ಟೆಯಲ್ಲಿ ಹುಟ್ಟಿ ಬರುತ್ತೇನೆ ಎಂದ ಅಪ್ಪು..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಮ್ಮನಗಲಿ 2 ವರ್ಷಗಳೇ ಕಳೆದಿದೆ. ಪುನೀತ್ ರಾಜ್‌ಕುಮಾರ್ ಇಂದು ದೈಹಿಕವಾಗಿ ನಮ್ಮ ಕಣ್ಣೆದುರು ಇಲ್ಲವಾದರೂ ಕೂಡ, ಅವರ ಸಾಮಾಜಿಕ ಕೆಲಸಗಳು, ಉತ್ತಮ ನಡತೆ ಮೂಲಕ ಇಂದು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಪುನರ್‌ಜನ್ಮ ತಜ್ಞ ರಾಮಚಂದ್ರ ಗುರೂಜಿ ಅವರು ಪುನೀತ್ ರಾಜ್‌ಕುಮಾರ್ ಆತ್ಮದ ಜೊತೆ ಮಾತನಾಡಿದ್ದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಪ್ಪು ಆತ್ಮದ ಜೊತೆಗೆ ಸತ್ತ ಕೆಲವೇ ದಿನಗಳಲ್ಲಿ ಮಾತನಾಡಿದ್ದೆ,  ಈ ಸಂಭಾಷಣೆಯನ್ನು ನಾನು ಸಾಮಾಜಿಕವಾಗಿ ಬಹಿರಂಗವಾಗಿ ಮಾಡಿಲ್ಲ. ನನ್ನ ವೈಯಕ್ತಿಕ ಮಾಹಿತಿಗೋಸ್ಕರ ನಾನು ಮಾಡಿದ್ದೆ. ಯಾಕಂದ್ರೆ ಅವರ ಅಭಿಮಾನಿಗಳು ಕೋಟ್ಯಾಂತರ ಲೆಕ್ಕದಲ್ಲಿ ಇದ್ದಾರೆ. ಪಬ್ಲಿಕ್ ಪ್ಲಾಟ್‌ಫಾರ್ಮ್‌ನಲ್ಲಿ ಮಾಡಿದರೆ, ಬರುವ ಪ್ರಶ್ನೆಗಳು, ಅದನ್ನು ತಡೆದುಕೊಳ್ಳುವ ಶಕ್ತಿ ನಮಗೆ ಇರಲಿಲ್ಲ.

ನನ್ನ ಮೊದಲ ಪ್ರಶ್ನೆ ಅಪ್ಪು ಅವರೇ ನಿಮ್ಮ ಸಾವಿನ ಬಗ್ಗೆ ಅನೇಕ ಅಪೋಹಳಿವೆ ಇದು ನಿಜನಾ? ಈ ಪ್ರಶ್ನೆಗೆ ಇಲ್ಲ ನಾನು ಹೃದಯ ಸಂಬಂಧಿ ಖಾಯಿಲೆಯಿಂದ ಮೃತಪಟ್ಟಿದ್ದೇನೆ ಎಂದರು. ಎರಡನೇ ಪ್ರಶ್ನೆ ದೇಹದಿಂದ ಬಿಟ್ಟು ಹೋದ್ರಲ್ಲ ಈಗ ಎಲ್ಲಿದ್ದೀರಿ ಎಂದು ಕೇಳಿದ್ದೆ. ಅದಕ್ಕೆ ಅವರು ಅಪ್ಪ-ಅಮ್ಮನ ಹುಡುಕಾಟದಲ್ಲಿ ಇದ್ದೇನೆ ಎಂದಿದ್ದರು. ಮೂರನೇ ಪ್ರಶ್ನೆ ಕೇಳಿದ್ದು, ಮತ್ತೆ ಹುಟ್ಟಿ ಬರ್ತಿರಾ ಅಂತ. ಅದರ ಬಗ್ಗೆ ಯೋಚನೆ ಮಾಡಿಲ್ಲ. ಒಂದೊಮ್ಮೆ ಹುಟ್ಟಿಬರುವುದಾದರೆ ನಾನು ನನ್ನ ಮಗಳ ಹೊಟ್ಟೆಯಲ್ಲಿ ಹುಟ್ಟಿ ಬರುತ್ತೇನೆ. ಇದಿಷ್ಟು ಆತ್ಮದ ಜತೆ ಸಂಭಾಷಣೆ ಮಾಡಿ ತಿಳಿದುಕೊಂಡಿದ್ದು ಎಂದಿದ್ದಾರೆ.

ಅವರ ಸಾವಿನ ಬಗ್ಗೆ ಸಾಕಷ್ಟು ಕುತೂಹಲ ವ್ಯಕ್ತವಾಗುತ್ತಿದ್ದರಿಂದ, ನಾವು ನಮ್ಮ ಸಂಶೋಧನೆಗಾಗಿ. ಖಾಸಗಿ ಭಂಡಾರಕ್ಕಾಗಿ ಮಾಡಿದ್ದು ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅಪ್ಪು ಅಂತಹ ಸುಂದರ ವ್ಯಕ್ತಿತ್ವದ  ಆತ್ಮಗಳಿಗೆ ಸದ್ಗತಿ ಕೂಡ ಆಗಬಹುದು. ಅಥವಾ ಮರುಹುಟ್ಟು ಆಗಬಹುದು ಎಂದಿದ್ದಾರೆ.

ಇದನ್ನೂ ಓದಿ : ಯಶಸ್ವಿಯಾಗಿ ನಡೆದ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಮಹಾಸಭೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here