ಬೆಂಗಳೂರು : ಬಿಗ್ಬಾಸ್ ಕನ್ನಡ, ಹಳ್ಳಿಕಾರ್ ಖ್ಯಾತಿಯ ವರ್ತೂರು ಸಂತೋಷ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಾಣಿಗಳನ್ನು ಅತಿಯಾಗಿ ಪ್ರೀತಿಸುವ ಹಳ್ಳಿಕಾರ್ ವರ್ತೂರು ಸಂತೋಷ್ ಈಗ ಪ್ರಾಣಿಗಳ ವಿಚಾರವಾಗಿಯೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹುಲಿ ಉಗುರು ಧರಿಸಿರುವ ಕಾರಣಕ್ಕೆ ಈ ಹಿಂದೆ ಬಿಗ್ಬಾಸ್ ಮನೆಯಲ್ಲಿರುವಾಗಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಒಂದು ವಾರದ ವಿಚಾರಣೆ ಬಳಿಕ ಜಾಮೀನಿನ ಮೇರೆಗೆ ವರ್ತೂರು ಸಂತೋಷ್ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ ವರ್ತೂರು ಸಂತೋಷ್ ವಿರುದ್ಧ ಆರೋಪವೊಂದು ಕೇಳಿಬಂದಿದೆ.
ವರ್ತೂರ್ ಸಂತೋಷ್ ಪ್ರಾಣಿಗಳ ಸಾಗಾಣಿಕೆ ಮಾಡುವಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ NCR ದಾಖಲಾಗಿದೆ.
ಹಳ್ಳಿಕಾರ್ ಹಸುಗಳನ್ನು ವಾಹನದಲ್ಲಿ ಸಾಗಾಣಿಕೆ ಮಾಡುವಾಗ ವರ್ತೂರು ಸಂತೋಷ್ ಹಾಗೂ ತಂಡ ನಿಯಮ ಉಲ್ಲಂಘನೆ ಮಾಡಿದ್ದು, ಒಂದೇ ಒಂದು ಟ್ರಕ್ನಲ್ಲಿ ಬರೋಬ್ಬರಿ 9 ಹೋರಿಗಳನ್ನು ಹಾಗೂ ಇತರೆ ಸಂಬಂಧಿಸಿದ ವಸ್ತುಗಳ ಇಟ್ಟು ಫಾರ್ಮ್ ಹೌಸ್ನಿಂದ ಸಾಗಾಟ ಮಾಡಿದೆ. ಇದು ಪ್ರಾಣಿ ಹಿಂಸೆ, ಪ್ರಾಣಿಗಳ ಸಾಗಾಟ ನಿಯಮವನ್ನು ಉಲ್ಲಂಘಿಸಿದಂತೆ ಆಗುತ್ತದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ – ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು..!