ಮಂಡ್ಯ : ವಿಶ್ವವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದೆ. ಈ ಬೆನ್ನಲ್ಲೇ ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೂ ಚಾಲನೆ ಸಿಗಲಿದೆ. ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ಇಂದು ಮಧ್ಯಾಹ್ನ 2:30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಇನ್ನೂ ಜಂಬೂ ಸವಾರಿಗೆ ವಿವಿಧ ಕಲಾತಂಡಗಳ ಸಾಂಸ್ಕೃತಿಕ ವೈಭವ ಮೆರುಗು ನೀಡಲಿದೆ.

ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.

ಇದರ ಜೊತೆ ಮಂಡ್ಯ ಜಿಲ್ಲೆಯ KRSನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ನಾಳೆಯಿಂದ 5 ದಿನಗಳ ಕಾಲ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ : ಪವನ್ ಕಲ್ಯಾಣ್ ‘OG’ ಸಿನಿಮಾ ರಿಲೀಸ್ ವೇಳೆ ಫ್ಯಾನ್ಸ್ ಹುಚ್ಚಾಟ.. ಲಾಂಗ್ ತೋರಿಸಿ ಧಿಮಾಕು ಮೆರೆದ ಆಂಧ್ರವಾಲಗಳಿಗೆ ಗುಮ್ಮಿದ ಕನ್ನಡಿಗರು!!







