Download Our App

Follow us

Home » ಜಿಲ್ಲೆ » ವಿಜಯಪುರದಲ್ಲಿ ಬೈಕ್ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್.. ಬೈಕ್ ಸವಾರ ಸ್ಥಳದಲ್ಲೇ ಸಾ*ವು..!

ವಿಜಯಪುರದಲ್ಲಿ ಬೈಕ್ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್.. ಬೈಕ್ ಸವಾರ ಸ್ಥಳದಲ್ಲೇ ಸಾ*ವು..!

ವಿಜಯಪುರ : ಸಿಂದಗಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಂದಗಿ ತಾಲ್ಲೂಕಿನ ಗಬಸಾವಳಗಿ ಬಳಿ ಬೈಕ್​​ ಹಾಗೂ ಸರ್ಕಾರಿ ಬಸ್​​ ನಡುವೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದಿದೆ. ಬಸ್ ಪ್ರಯಾಣಿಕರು ಅಪಾಯದಿಂದ ಪಾರಾದರೂ ಬೈಕ್ ಸವಾರ ಮಾತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ಹೊರಟಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎ28 ಎಫ್ 2469 ಸಂಖ್ಯೆಯ ಬಸ್ ಗೆ ಎದುರಿನಿಂದ ಬಂದ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಬಸ್ಸಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸೇವೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೂ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಘಟನೆಯಿಂದ ಎನ್ ಎಚ್ 50 ರಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಬೆಂಕಿ ನಂದಿಸಿದ ಬಳಿಕ ಸಂಚಾರ ಸಹಜವಾಗಿ ಆರಂಭವಾಗಿದೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತ ಬೈಕ್ ಸವಾರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ಖಾಸಗಿ ಬ್ಯಾಂಕ್​ನಿಂದ ಕಿರುಕುಳ ಆರೋಪ : ವಿಧಾನಸೌಧ ಮುಂಭಾಗ ಆತ್ಮಹ*ತ್ಯೆಗೆ ಯತ್ನಿಸಿದ ದಂಪತಿ..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here