ಬುರುಡೆ ಗ್ಯಾಂಗ್ ಷಡ್ಯಂತ್ರ ಮೊದಲೇ ಗೊತ್ತಿತ್ತು.. SIT ವರದಿ ಬಳಿಕ ಮಾತಾಡ್ತೀನಿ – ಡಿಸಿಎಂ ಡಿಕೆಶಿ ಸ್ಪೋಟಕ ಹೇಳಿಕೆ!

ಬೆಂಗಳೂರು : ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಬುರುಡೆ ಗ್ಯಾಂಗ್ ಷಡ್ಯಂತ್ರದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿ, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ ಎಂದು ಹೇಳಿದ್ದಾರೆ.

ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತೂ, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದು ಗೊತ್ತು, ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದ್ರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡ್ತಿದ್ದಾರೆ, ವರದಿ ಕೊಡ್ತಾರೆ ಎಂದು ತಿಳಿಸಿದರು.

ಬುರುಡೆ ಗ್ಯಾಂಗ್ ಷಡ್ಯಂತ್ರ : ಸುಪ್ರೀಂ ಆದೇಶ ಮುಚ್ಚಿಟ್ಟು ರಾಜ್ಯ ಸರ್ಕಾರವನ್ನೇ ಈ ಬುರುಡೆ ಗ್ಯಾಂಗ್‌ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್‌ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು.

ಇದನ್ನೂ ಓದಿ : ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ DNA ಪಾಸಿಟಿವ್ – ಯುವತಿ ಜೊತೆ ಮದುವೆಗೆ ವಿಶ್ವಕರ್ಮ ಅಧ್ಯಕ್ಷ ಕೆ.ಪಿ. ನಂಜುಂಡಿ ಮನವಿ!

Btv Kannada
Author: Btv Kannada

Read More