ಬೆಂಗಳೂರು : ಬೆಂಗಳೂರಲ್ಲಿ ಹಿಟ್ ಅಂಡ್ ರನ್ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಧನುಶ್ರೀ (22) ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ.
ನಾರಾಯಣ ಮಠದ ನಿವಾಸಿಯಾಗಿರುವ ಮೃತ ಧನುಶ್ರೀ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದಳು. ಇಂದು ಬೆಳಗ್ಗೆ ಕಾಲೇಜಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಟಿಪ್ಪರ್ಗೆ ಡಿಕ್ಕಿ ಹೊಡೆದ ಶಂಕೆ ವ್ಯಕ್ತವಾಗಿದ್ದು, ಬೈಕ್ನಿಂದ ಕೆಳಗೆ ಬಿದ್ದಾಗ ಧನುಶ್ರೀ ಮೇಲೆ ಟಿಪ್ಪರ್ ಹರಿದು ಸಾವನ್ನಪ್ಪಿದ್ದಾಳೆ.

ಧನುಶ್ರೀ ಮೇಲೆ ಟಿಪ್ಪರ್ ಹರಿಸಿ ಚಾಲಕ ಎಲ್ಲೂ ನಿಲ್ಲಿಸದೇ ಎಸ್ಕೇಪ್ ಆಗಿದ್ದು, ಘಟನಾ ಸ್ಥಳದಲ್ಲಿ ಕೆ.ಆರ್.ಪುರಂ ಟ್ರಾಫಿಕ್ & ಆವಲಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಗುಂಡಿ ಸಮಸ್ಯೆ ಹಿನ್ನೆಲೆ ಅಪಘಾತ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಂಗಭೂಮಿ ಕಲಾವಿದ, ನಟ ಯಶವಂತ ಸರದೇಶಪಾಂಡೆ ವಿಧಿವಶ!
Author: Btv Kannada
Post Views: 400







