ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಜೈಲು ಪಾಲಾಗಿದ್ದು, ಆರೋಪಿಗಳು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕೊಲೆ ಹಾಗೂ ಅಪಹರಣದಲ್ಲಿ ಭಾಗಿಯಾಗಿದ್ದಾರೆ. ಇದೀಗ ಈ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾಕ್ಷಿ ನಾಶ ಮಾಡಲು ಬಂದವರೇ ಈಗ ಪ್ರಮುಖ ಸಾಕ್ಷಿಗಳಾಗಿದ್ದಾರೆ. ರೇಣುಕಾಸ್ವಾಮಿ ಮೃತದೇಹ ಡಿಸ್ಪೋಸ್ ಹೋಗಿದ್ದ ರವಿ ಪ್ರಕಾಶ್, ನಿಖಿಲ್ ನಾಯಕ್, ಕಾರ್ತಿಕ್ ಇದೀಗ ಪ್ರಮುಖ ಸಾಕ್ಷಿಗಳಾಗಿದ್ದಾರೆ.
ಈ ಮೂವರು ಆರೋಪಿಗಳು ಕೊಲೆಯ ನಂತರ ಮೃತದೇಹ ಬಿಸಾಡಿ ಸಾಕ್ಷಿ ನಾಶ ಮಾಡಲು ಹೋಗಿದ್ದರು. ಆದರೆ ಈಗ ಇದೇ ಆರೋಪಿಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದಾರೆ. ಪೊಲೀಸರು ಈ ಮೂವರ CRPC 164 ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಸಿಆರ್ಪಿಸಿ 164 ರ ಅಡಿಯಲ್ಲಿ ಸಾಕ್ಷ್ಯಗಳ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿದ್ದು ಮಾತ್ರವಲ್ಲದೇ ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಜೂನ್ 9ಕ್ಕೆ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ರಾಜಕಾಲುವೆ ಬಳಿ ಬಿಸಾಡಿದ್ರು. ನಂತರ ಶವ ದೊರೆತ ಬಳಿಕ ಪೊಲೀಸರ ಎದುರು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.
ಇದನ್ನೂ ಓದಿ : ರಾಜ್ಯದಲ್ಲಿ ಡೆಡ್ಲಿ ಡೆಂಘೀ ರಣಾರ್ಭಟ – 7000 ಸಾವಿರ ಗಡಿ ದಾಟಿದ ಕೇಸ್..!