ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 18ರವರೆಗೆ ಕೋರ್ಟ್ ವಿಸ್ತರಣೆ ಮಾಡಿದ್ದು, ಡಿ-ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಮತ್ತಷ್ಟು ದಿನ ದೂಡಬೇಕಿದೆ.
ಇದೀಗ ಈ ಪ್ರಕರಣದ ತನಿಖೆ ಚುರುಕುಗೊಂಡಿರುವ ಹೊತ್ತಲ್ಲೇ FSL ಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. FSL ತಜ್ಞರನ್ನ ಬಳಸಿ ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಸೆಕ್ಯೂರಿಟಿ ಗಾರ್ಡ್ ಕೊಠಡಿ ಹಾಗೂ ಮೃತನ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್,ಆರೋಪಿಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ಗಳನ್ನು ಸಂಗ್ರಹಿಸಲಾಗಿತ್ತು.
ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ FSLಗೆ ರವಾನೆ ಮಾಡಲಾಗಿತ್ತು. ಇದೀಗ FSL ಪರೀಕ್ಷೆಯಲ್ಲಿ ದರ್ಶನ್, ಪವಿತ್ರಾ ಸೇರಿ ಹತ್ತಕ್ಕೂ ಹೆಚ್ಚು ಜನರ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತಿದೆ ಎಂದು ಬಹಿರಂಗವಾಗಿದೆ. ಈ ಫಿಂಗರ್ ಪ್ರಿಂಟ್ಗಳೇ ಆರೋಪಿಗಳ ವಿರುದ್ದ ಪ್ರಮುಖ ಸಾಕ್ಷಿಯಾಗಲಿದೆ.
ಇದನ್ನೂ ಓದಿ : KSRTC ಕ್ರೆಡಿಟ್ ಸೊಸೈಟಿ ಎಲೆಕ್ಷನ್ನಲ್ಲಿ ಗಲಾಟೆ – ಪರಸ್ಪರ ಕೈ ಕೈ ಮಿಲಾಯಿಸಿದ ಬಣದ ಸದಸ್ಯರು..!