ಬೆಂಗಳೂರು : KR ನಗರದ ಸಂಸತ್ರಸ್ಥೆ ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಕೇಸ್ನಲ್ಲಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹಾಗೆಯೇ ನಿರೀಕ್ಷಣಾ ಬೇಲ್ ಕ್ಯಾನ್ಸಲ್ ಮಾಡುವಂತೆ SIT ಮನವಿ ಮಾಡಿದೆ.
ಹೈಕೋರ್ಟ್ ತೀರ್ಪು ಪ್ರಶ್ನಿಸಿ SIT ಸುಪ್ರೀಂ ಮೊರೆ ಹೋಗಿದ್ದು, ತನಿಖೆಗೆ ಭವಾನಿ ಸಹಕಾರ ಕೊಟ್ಟಿಲ್ಲ ಎಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ಮೇಲೆ IPC ಸೆಕ್ಷನ್ 364A, 365, 34ರ ಅಡಿ ಕೇಸ್ ದಾಖಲಾಗಿದೆ.
ನಿರೀಕ್ಷಣಾ ಜಾಮೀನು ಕೋರಿ ಭವಾನಿ ಸಲ್ಲಿಸಿದ್ದ ಮನವಿಯನ್ನು ಜೂನ್ 18ರಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪುರಸ್ಕರಿಸಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರವು ಪ್ರಶ್ನಿಸಿದ್ದು, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನೇತೃತ್ವದಲ್ಲಿ ನಾಳೆ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಹಾಗಾಗಿ ನಾಳೆಯೇ ಭವಾನಿ ಭವಿಷ್ಯ ನಿರ್ಧಾರವಾಗಲಿದೆ.
ಇದನ್ನೂ ಓದಿ : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಬರ್ತಡೇಗೆ ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್..!