Download Our App

Follow us

Home » ಜಿಲ್ಲೆ » ದಕ್ಷಿಣ ಕಾಶಿ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಜನ..!

ದಕ್ಷಿಣ ಕಾಶಿ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಜನ..!

ವಿಜಯನಗರ : ಹೊಸಪೇಟೆ ತಾಲೂಕಿನ ಹಂಪಿಯ ಹೇಮಕೂಟದ ಬಳಿ ಗುಡ್ಡದ ಮೇಲೆ ಚಿರತೆ ಕಂಡುಬಂದಿದೆ. ಹೇಮಕೂಟದ ಬಳಿ ಗುಡ್ಡದ ಮೇಲೆ ಸೋಮವಾರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದೆ. ಗುಡ್ಡದ ಮೇಲಿನ ದೊಡ್ಡ ಕಲ್ಲು ಬಂಡೆ ಏರಿ ಕುಳಿತಿದ್ದ ಚಿರತೆಯ ವಿಡಿಯೋ ಹಾಗೂ ಫೋಟೋಸ್ ಸ್ಥಳೀಯ ನಿವಾಸಿಯೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆ ಹಂಪಿ ಮತ್ತು ಕನ್ನಡ ವಿವಿಯಲ್ಲಿ ಕರಡಿಗಳು ಜನ ನಿಬಿಡ ಪ್ರದೇಶದಲ್ಲಿ ಕಂಡು ಬಂದಿದ್ದವು. ಈಗ ಚಿರತೆಯ ಸರದಿಯಾಗಿದ್ದು, ಸಾಯಂಕಾಲದ ಹೊತ್ತು ಚಿರತೆ ಗುಡ್ಡದ ಮೇಲೆ ಕಂಡು ಬಂದಿದೆ.

ಚಿರತೆ ಪ್ರತ್ಯಕ್ಷಗೊಂಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಹಂಪಿಯ ಕೆಲ ಪ್ರದೇಶದಲ್ಲಿ ಜೋಡಿ ಚಿರತೆಗಳು ಪ್ರತ್ಯಕ್ಷವಾಗಿದ್ದವು. ಆದ್ರೆ ಇಲ್ಲಿಯವರೆಗೆ ಈ ಪ್ರದೇಶದಲ್ಲಿ ಚಿರತೆ ಮತ್ತು ಮಾನವ ಸಂಘರ್ಷದ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲಾ.

ಇದನ್ನೂ ಓದಿ : ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ಭೇಟಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here