ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ಗೆ ಜೈಲೂಟ ಸಾಕಾಗಿ ಹೋಗಿದೆ. ಜೈಲೂಟ ಸಾಕು, ಮನೆ ಊಟ ಕೊಡಿಸಿ ಎಂದು ದರ್ಶನ್ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪರಪ್ಪನ ಅಗ್ರಹಾರದ ಸೆಲ್ನಲ್ಲಿರುವ ದರ್ಶನ್ ದೇಹದ ತೂಕ ದಿನ ಕಳೆದಂತೆ ಕೂಡ ಕಡಿಮೆ ಆಗುತ್ತಿದೆ. 26 ದಿನಗಳಲ್ಲಿ ದರ್ಶನ್ 10 ಕೆಜಿ ಕಡಿಮೆ ಆಗಿದ್ದಾರಂತೆ. ಹೀಗಾಗಿ ದರ್ಶನ್ ಪರ ವಕೀಲರು ಊಟ, ಹಾಸಿಗೆ, ಪುಸ್ತಕವನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದರ್ಶನ್ ಪರ ವಕೀಲರಿಂದ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನೀಡುತ್ತಿರುವ ಊಟ ದರ್ಶನ್ಗೆ ಜೀರ್ಣವಾಗುತ್ತಿಲ್ಲ, ಇದರಿಂದ ಅತಿಸಾರ – ಭೇದಿ ಆಗುತ್ತಿದೆ ಎಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖವಾಗಿದೆ.
ಇದೇ ರೀತಿ ಮುಂದುವರಿದರೆ ದರ್ಶನ್ ಆರೋಗ್ಯ ಕೆಡಬಹುದು, ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆ ಆಗಲ್ಲ. ಸರಕಾರದ ಬೊಕ್ಕಸಕ್ಕೂ ಹೊರೆ ಕಡಿಮೆಯಾಗುತ್ತದೆ,
ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ಕೊಡಿ ಎಂದು ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ದಕ್ಷಿಣ ಕಾಶಿ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಜನ..!