ಬೆಂಗಳೂರು : ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರುವ ಯುವತಿ.

ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತನ ಜೊತೆ ಇಲ್ಲಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ದರು. ಕ್ರಿಕೆಟ್ ಮ್ಯಾಚ್ ನೋಡಿಕೊಂಡು ವಾಪಸ್ ಬರ್ತಿದ್ದಾಗ ಏಕಾಏಕಿ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯಲ್ಲಿ ಕೂತಿದ್ದ ವ್ಯಕ್ತಿಗೆ ಗಾಯಗಳಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಭಾಸ್ಕರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮರ ಬಿದ್ದ ತಕ್ಷಣ ಕೊಂಬೆಗಳನ್ನು ತೆರವು ಮಾಡಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ದಸರಾ ಬೆನ್ನಲ್ಲೇ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ – ಅನ್ನಭಾಗ್ಯ ಅಕ್ಕಿ ಪಡೆಯಲು ಬಂದವರ BPL ಕಾರ್ಡ್ಗಳೇ ರದ್ದು!
Author: Btv Kannada
Post Views: 582







