Download Our App

Follow us

Home » ರಾಷ್ಟ್ರೀಯ » ಬಸ್​ ಮತ್ತು ಹಾಲಿನ ಟ್ಯಾಂಕರ್​ ನಡುವೆ ಡೆಡ್ಲಿ ಆಕ್ಸಿಡೆಂಟ್ : 18 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!​

ಬಸ್​ ಮತ್ತು ಹಾಲಿನ ಟ್ಯಾಂಕರ್​ ನಡುವೆ ಡೆಡ್ಲಿ ಆಕ್ಸಿಡೆಂಟ್ : 18 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!​

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್​ ಹಾಗೂ ಹಾಲಿನ ಟ್ಯಾಂಕರ್​ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಸ್ಲೀಪರ್ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್ಪಿ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ನಿಗಮ ಹಗರಣ ಕೇಸ್​ : ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ-ಕಚೇರಿಗಳ​​ ಮೇಲೆ ಬೆಳ್ಳಂಬೆಳಗ್ಗೆ ED ರೇಡ್ ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here