ಬೆಂಗಳೂರು : ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು ವಿಚಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿ ಕಾಂಗ್ರೆಸ್ಗೆ ಪಶ್ಚಾತ್ತಾಪ ಪಡುವ ಕಾಲ ಬಂದೇ ಬರುತ್ತೆ, ಕಾಂಗ್ರೆಸ್ ನಾಯಕರಿಗೆ ಆ ರಾಮನೇ ಒಳ್ಳೆಯ ಬುದ್ಧಿ ಕೊಡಲಿ ಎಂದು ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರು ಮಾತನಾಡಿ ವಿಶೇಷ ಸಂದರ್ಭದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಯಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ಆಮಂತ್ರಣ ಇದ್ದರೂ ಹೋಗಲ್ಲ ಅಂತಿದ್ದಾರೆ. ಕಾಂಗ್ರೆಸ್ನವರು ಕಾರ್ಯಕ್ರಮಕ್ಕೆ ಹೋಗದಿರೋದು ದುರ್ದೈವವಾಗಿದೆ. ಕಾಂಗ್ರೆಸ್ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕು ಕಾಂಗ್ರೆಸ್ಗೆ ಜನ ಪಾಠ ಕಲಿಸ್ತಾರೆ, ದೇವರು ಕಾಂಗ್ರೆಸ್ಗೆ ಒಳ್ಳೆಯ ಬುದ್ದಿ ಕೊಡಲಿ ಎಂದಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.
ಇದನ್ನೂ ಓದಿ : ಜಮೀನಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಂಡ ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರು..