ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ – ಸರ್ಕಾರದ ವಿರುದ್ಧ ಬಿ.ಎಲ್ ಸಂತೋಷ್ ಕಿಡಿ!

ವಿಜಯಪುರ : ಶಾಂತಿ ಹಾಗೂ ಸೌಹಾರ್ದ ಕಾರಣಕ್ಕೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಡಿಸಿ ಡಾ. ಆನಂದ್ ಕೆ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತದ ಕಠಿಣ ಹೆಜ್ಜೆ. ರಾಜ್ಯ ಸರ್ಕಾರ ಪೋಷಿಸುತ್ತಿರುವ ಕೆಲವು ವಿಷಯಗಳ ಬಗ್ಗೆ ಪೂಜ್ಯ ಶ್ರೀ ಶ್ರೀ ಅದ್ಭುತ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪರ್ಯಾಯ ಅಭಿಪ್ರಾಯ ಹೊಂದಿದ್ದಾರೆ ಎಂಬ ಕಾರಣಕ್ಕಾಗಿ, ಅವರು ವಿಜಯಪುರ ಜಿಲ್ಲೆಗೆ ಪ್ರವೇಶಿಸುವುದನ್ನು ತಡೆದಿದ್ದಾರೆ ಎಂದು ಬಿಎಲ್ ಸಂತೋಷ್ ಕಿಡಿ ಕಾರಿದ್ದಾರೆ.

ಇನ್ನು, ಶ್ರೀ ಕನ್ಹೇರಿ ಮಠದ ಪೂಜ್ಯ ಸ್ವಾಮೀಜಿ ಕೃಷಿ, ಸ್ವಾವಲಂಬನೆ, ಕೌಶಲ್ಯ ಅಭಿವೃದ್ಧಿಯಲ್ಲಿ ಗ್ರಾಮೀಣ ಭಾಗಗಳಿಗೆ ನೀಡಿದ ಅತ್ಯುತ್ತಮ ಸೇವೆಗಾಗಿ ಎಲ್ಲಾ ಸಮುದಾಯಗಳಲ್ಲಿ ಗೌರವಾನ್ವಿತರಾಗಿದ್ದಾರೆ ಎಂದು ಬಿಎಲ್ ಸಂತೋಷ್ ಹೇಳಿದ್ದಾರೆ.

ಇದನ್ನೂ ಓದಿ : `ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ – ರೋರಿಂಗ್ ಸ್ಟಾರ್ ಶ್ರೀಮುರುಳಿ ಸಾಥ್!

Btv Kannada
Author: Btv Kannada

Read More