Download Our App

Follow us

Home » ರಾಜ್ಯ » ಅಂಕೋಲಾದಲ್ಲಿ ಮಹಾ ಮಳೆಯ ದುರಂತ – ಮಣ್ಣಿನ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸಾ*ವು..!

ಅಂಕೋಲಾದಲ್ಲಿ ಮಹಾ ಮಳೆಯ ದುರಂತ – ಮಣ್ಣಿನ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸಾ*ವು..!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಪರಿಣಾಮ ಅಂಕೋಲಾ ತಾಲೂಕಿನ ಶಿರೂರು ಬಳಿ ಮಣ್ಣಿನ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ, ರೋಷನ್(11)​, ಆವಂತಿಕಾ(6) , ಜಗನ್ನಾಥ(55) ಸೇರಿದಂತೆ  ಮಂದಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರು ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಸ್ಥಗಿತಗೊಂಡಿದೆ.

ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಇದೆ. ಮಾಹಿತಿಗಳ ಪ್ರಕಾರ.. ಅಂಗಡಿ ಮಾಡಿಕೊಂಡು ಅಲ್ಲೇ ಐವರು ವಾಸವಿದ್ದರು ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ಕೇವಲ ಮನೆಯವರು ಮಾತ್ರವಲ್ಲದೇ ಗ್ರಾಹಕರೂ ಕೂಡ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಇನ್ನು ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದರು. ಇದೇ ವೇಳೆ ಭಾರಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದ್ದು, ನದಿಯಲ್ಲಿ ಕೊಚ್ಚಿ ಹೋಗುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಟ್ಯಾಂಕರ್​ನ ಚಾಲಕ ಹಾಗೂ ಕ್ಲೀನರ್ ಕೂಡ ಮಣ್ಣಿನಡಿ ಸಿಲುಕಿದ್ದಾರೆ. ಮಣ್ಣಿನಡಿ ಸಿಲುಕಿದವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಜಿಲ್ಲಾಡಳಿತವು ಹೆದ್ದಾರಿ‌ ಮೇಲಿನನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭಿಸಿದೆ.

ನಿರಂತರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಬಂದ್ ಮಾಡಲಾಗಿದೆ.

ಇದನ್ನೂ ಓದಿ : ನಾಗೇಂದ್ರ ಬೆನ್ನಲ್ಲೇ ದದ್ದಲ್​​ಗೂ ಅರೆಸ್ಟ್ ಸಂಕಷ್ಟ – ಸೆಷನ್​​ ನಡೆಯೋ ಹೊತ್ತಲ್ಲೇ ನೋಟಿಸ್​ ಕೊಟ್ಟ ED..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here