ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಶಿವಮೊಗ್ಗ ಸಮೀಪದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ತೀರ್ಥಹಳ್ಳಿಯಲ್ಲಿ ನದಿಯ ನಡುವೆ ಇರುವ ರಾಮಮಂಟಪ ಮುಳುಗಿದೆ. ಶಿವಮೊಗ್ಗ ನಗರದಲ್ಲಿ ಕೋರ್ಪಲಯ್ಯನ ಛತ್ರದ ಬಳಿಯಿರುವ ಮಂಟಪ ಸಂಪೂರ್ಣವಾಗಿ ನದಿಯಲ್ಲಿ ಮುಳುಗಡೆಯಾಗಿದೆ.
ತುಂಗಾ ಡ್ಯಾಂಗೆ ಡಿಸಿ ಭೇಟಿ ನೀಡಿ, ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದಿದ್ದಾರೆ. ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಶೃಂಗೇರಿ, ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪರಿಣಾಮ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಜಲಾಶಯಕ್ಕೆ ಭಾರೀ ನೀರು ಹರಿದು ಬರುತ್ತಿದೆ. 21 ಗೇಟ್ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ. ತುಂಗಾ ಡ್ಯಾಂನಿಂದ ಬಿಟ್ಟ ನೀರು ಶಿವಮೊಗ್ಗ ನಗರದ ಮೂಲಕ ಕೂಡಲಿ ತಲುಪಿ ಅಲ್ಲಿ ಭದ್ರಾನದಿಯೂ ಸೇರಿಕೊಂಡು ಬಳ್ಳಾರಿಯಲ್ಲಿರುವ ತುಂಗಾಭದ್ರಾ ಜಲಾಶಯ ತಲುಪುತ್ತದೆ.
ಇದನ್ನೂ ಓದಿ : ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ : ರಿಲೀಸ್ ಆಯ್ತು ‘ಗೌರಿ’ ಚಿತ್ರದ 2 ಹಾಡುಗಳು..!