ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ. ನನ್ನ ವರ್ಚಸ್ಸು ಸಹಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಆಗ್ತಿಲ್ಲ. ಹೀಗಾಗಿ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೀತಾ ಇದೆ ಎಂದು ವಿಧಾನಪರಿಷತ್ನಲ್ಲಿ ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮುಡಾ ಕೋಲಾಹಲ ಎಬ್ಬಿಸಿದ್ದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಸೈಟ್ಗಾಗಿ ನಾವು ಅರ್ಜಿ ಹಾಕಿದ್ದು ನಿಜ. ಆದರೆ ಸೈಟ್ ಇಲ್ಲೆ ಕೊಡಿ, ಅಲ್ಲೆ ಕೊಡಿ ಎಂದು ಹೇಳಿಲ್ಲ. ಯಾವುದೇ ಕಾನೂನು ಬಾಹಿರವಾಗಿ ನಡೆದಿಲ್ಲ ಎಂದಿದ್ದಾರೆ.
ಇನ್ನು 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಹೀಗಾಗಿ ಬಿಜೆಪಿಯವರಿಗೆ ನನ್ನ ಮೇಲೆ ಹೊಟ್ಟೆ ಕಿಚ್ಚು ಎಂದು ಇಂದು ಕೂಡ ಸದನಲ್ಲಿ ಮುಡಾ ಕೋಲಾಹಲ ಎಬ್ಬಿಸಿದ್ದ ಬಿಜೆಪಿ ವಿರುದ್ದ ಪರಿಷತ್ನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಇದನ್ನೂ ಓದಿ : ಶಿರೂರು ಗುಡ್ಡ ಕುಸಿತ : 10ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಪತ್ತೆಯಾದ ಲಾರಿಯನ್ನು ಮೇಲೆತ್ತಲು ಸಕಲ ಸಿದ್ಧತೆ..!