ಕಲಬುರಗಿ : ಜಿಟಿ ಜಿಟಿ ಮಳೆಯಲ್ಲೂ ಕಾರ್ ಹೊತ್ತಿ ಉರಿದ ಘಟನೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಸ್ಟೇಡಿಯಂ ಬಳಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಬಿಸಿಲೇ ಇಲ್ಲದಂತಾಗಿದೆ. ಇಂತಹ ಸಮಯದಲ್ಲೇ ರಸ್ತೆ ಬದಿ ನಿಂತಿದ್ದ ಮಾರುತಿ 800 ಕಾರ್ ಸಂಪೂರ್ಣ ಭಸ್ಮವಾಗಿದೆ.
ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ರು.
ಇದನ್ನೂ ಓದಿ : ನಟ ದರ್ಶನ್ಗೆ ಜೈಲೂಟವೇ ಗತಿ – ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್..!
Post Views: 143