ಮಂಡ್ಯ : ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರದಿಂದ 70 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ನದಿಪಾತ್ರದ ಜನರ ಸ್ಥಳಾಂತರಕ್ಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನ ಕಾವೇರಿ ಒಡಲಾದ ಕೆಆರ್ಎಸ್ ಡ್ಯಾಂ ಭರ್ತಿಯ ಅಂಚಿಗೆ ತಲುಪಿದೆ. ಹೀಗಾಗಿ ಡ್ಯಾಂನಿಂದ ನಿತ್ಯ ನೀರು ಬಿಡಲಾಗುತ್ತಿದೆ. ಅಲೆಗಳ ಅಬ್ಬರದಿಂದ KRS ಸಾಗರದಂತೆ ಭಾಸವಾಗುತ್ತಿದ್ದು, ಇಂದು ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಹೀಗಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
- ಗರಿಷ್ಠ ಮಟ್ಟ- 124.80 ಅಡಿ
- ಇಂದಿನ ಮಟ್ಟ- 124.35 ಅಡಿ
- ಗರಿಷ್ಠ ಸಾಂದ್ರತೆ- 49.452 ಟಿಎಂಸಿ
- ಇಂದಿನ ಸಾಂದ್ರತೆ- 48.824 ಟಿಎಂಸಿ
- ಒಳ ಹರಿವು- 90,000 ಕ್ಯೂಸೆಕ್
- ಹೊರ ಹರಿವು- 80,000 ಕ್ಯೂಸೆಕ್
ಇದನ್ನೂ ಓದಿ : ದರ್ಶನ್ ಭೇಟಿ ನಂತ್ರ ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿಗೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್..!
Post Views: 66