Download Our App

Follow us

Home » ಜಿಲ್ಲೆ » ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು – ಐತಿಹಾಸಿಕ ಹಂಪಿಯ ಸ್ಮಾರಕ, ಸ್ನಾನಘಟ್ಟಗಳು ಮುಳುಗಡೆ..!

ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು – ಐತಿಹಾಸಿಕ ಹಂಪಿಯ ಸ್ಮಾರಕ, ಸ್ನಾನಘಟ್ಟಗಳು ಮುಳುಗಡೆ..!

ವಿಜಯನಗರ : ರಾಜ್ಯದ್ಯಂತ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿಯ ವಿಧಿ – ವಿಧಾನ ಮಂಟಪಗಳು ಕೂಡ ಮುಳುಗಡೆಯಾಗಿವೆ.

ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಅಧಿಕ ನೀರು ನದಿಗೆ ರಿಲೀಸ್ ಮಾಡಲಾಗಿದೆ. 30 ಕ್ರಸ್ಟ್ ಗೇಟ್​ಗಳ ಮೂಲಕ ನದಿಗೆ ನೀರು ಹರಿಬಿಟ್ಟ ಪರಿಣಾಮ  ಹಂಪಿಯಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಇನ್ನು ಪುರಂದರದಾಸ ಮಂಟಪ ಕೂಡ ಮುಳುಗಡೆಯಾಗಿದೆ. ಕೋದಂಡರಾಮ ದೇಗುಲದ ಬಳಿ ನದಿನೀರು ಹರಿದುಬಂದಿದೆ.

ಇದನ್ನೂ ಓದಿ : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ತವರಲ್ಲೇ ಪಾದಯಾತ್ರೆ ಮಾಡಲು ಮೈತ್ರಿ ನಾಯಕರ ತಯಾರಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here