ವಿಜಯನಗರ : ರಾಜ್ಯದ್ಯಂತ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿಯ ವಿಧಿ – ವಿಧಾನ ಮಂಟಪಗಳು ಕೂಡ ಮುಳುಗಡೆಯಾಗಿವೆ.
ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಅಧಿಕ ನೀರು ನದಿಗೆ ರಿಲೀಸ್ ಮಾಡಲಾಗಿದೆ. 30 ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ನೀರು ಹರಿಬಿಟ್ಟ ಪರಿಣಾಮ ಹಂಪಿಯಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಇನ್ನು ಪುರಂದರದಾಸ ಮಂಟಪ ಕೂಡ ಮುಳುಗಡೆಯಾಗಿದೆ. ಕೋದಂಡರಾಮ ದೇಗುಲದ ಬಳಿ ನದಿನೀರು ಹರಿದುಬಂದಿದೆ.
ಇದನ್ನೂ ಓದಿ : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ತವರಲ್ಲೇ ಪಾದಯಾತ್ರೆ ಮಾಡಲು ಮೈತ್ರಿ ನಾಯಕರ ತಯಾರಿ..!
Post Views: 35