ಬಾಗಲಕೋಟೆ : ಚಹಾ ಅಂಗಡಿಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಜಮುಖಂಡಿ ನಗರದ ಟಿಪ್ಪುಸುಲ್ತಾನ್ ವೃತ್ತದಲ್ಲಿ ನಡೆದಿದೆ. ಕೆಂಪಣ್ಣ ಎನ್ನುವವರಿಗೆ ಸೇರಿದ ಚಹಾ ಅಂಗಡಿ ಅಗ್ನಿ ಅವಘಡಕ್ಕೆ ಸಿಲುಕಿ ಸುಟ್ಟು ಭಸ್ಮವಾಗಿದೆ.
ಘಟನೆಯ ಪರಿಣಾಮ, ಅಂಗಡಿಯಲ್ಲಿದ್ದ ರೆಫ್ರಿಜಿರೇಟರ್, ಸಕ್ಕರೆ, ಚಹಾಪುಡಿ ಸೇರಿ ಅಂದಾಜು 8ರಿಂದ 10 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ತಗಲುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ನೀರಿನ ಟ್ಯಾಂಕರ್ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನಿಸಿದರು. ಈ ಸಂಬಂಧ ಸ್ಥಳಕ್ಕೆ ಜಮಖಂಡಿ ಶಹರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮಹಿಳಾ ಏಷ್ಯಾಕಪ್ : ಬಾಂಗ್ಲಾವನ್ನು ಮಣಿಸಿ ಫೈನಲ್ ಪ್ರವೇಶಿಸಿದ ಭಾರತ..!
Post Views: 103