ಉಡುಪಿ : ಕಾರ್ಕಳದ ಕೃಷ್ಣಾ ಅಪಾರ್ಟ್ಮೆಂಟ್ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭಾರಿ ಶಬ್ದದೊಂದಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಕಾರ್ಕಳದ ಜನತೆ ಬೆಚ್ಚಿಬಿದ್ದಿದೆ.
ಕಾರ್ಕಳದ ಆನೆಕೆರೆ ಸಮೀಪ ಇರುವ ಅಪಾರ್ಟ್ಮೆಂಟ್ನಲ್ಲಿ ಸ್ಪೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಅಪಾರ್ಟ್ಮೆಂಟ್ನ 4 ಫ್ಲಾಟ್ಗಳಿಗೆ ಹಾನಿಯಾಗಿದ್ದು, ಮನೆಯ ಗೋಡೆಗಳು ಛಿದ್ರವಾಗಿದ್ದು, ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಘಟನೆಯ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಫ್ಲ್ಯಾಟ್ನಲ್ಲಿದ್ದವರ ಸಮಯ ಪ್ರಜ್ ಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಮಾರ್ಟಿನ್ ಸಿನಿಮಾ ಪ್ರೊಡ್ಯೂಸರ್ ಉದಯ್ ಮೆಹ್ತಾಗೆ ಲೀಗಲ್ ನೋಟಿಸ್ ಜಾರಿ..!
Post Views: 96