ಬೆಂಗಳೂರು : ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಅನ್ನೋ ಸುದ್ದಿ ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿತ್ತು. ಹಾಗಾಗಿ ಸಾಹುಕಾರ್ ರಾಹುಲ್ ಗಾಂಧಿ ಭೇಟಿ ಮಾಡಲು ಪ್ಲ್ಯಾನ್ ಮಾಡಿದ್ದರು. ಆದರೆ ಇದೀಗ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ದಿಢೀರ್ ರದ್ದಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಲು ಪ್ಲ್ಯಾನ್ ಮಾಡಿದ್ದರು. 3 ದಿನಗಳ ಕಾಲ ದೆಹಲಿಯಲ್ಲೇ ಇರುವ ಬಗ್ಗೆ ಜಾರಕಿಹೊಳಿ ಹೇಳಿದ್ದರು. ಈಗ ಸಾಹುಕಾರ್ ದಿಢೀರ್ ಅಂತಾ ದೆಹಲಿ ಪ್ರವಾಸ ಕ್ಯಾನ್ಸಲ್ ಮಾಡಿದ್ದಾರೆ.
ಸಚಿವ ಸತೀಶ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಬಳಿಕ AICC ಅಧ್ಯಕ್ಷ ಮಲ್ಲಿಕಾರ್ಜುನ್ ಅವರನ್ನೂ ಭೇಟಿಯಾಗಲು ತಯಾರಿ ನಡೆಸಿದ್ದರು. ಈ ವೇಳೆ ಜಾರಕಿಹೊಳಿಗೆ 5 ಮಂತ್ರಿಗಳು ಸಾಥ್ ಕೊಡಲಿದ್ದಾರೆ ಎನ್ನಲಾಗುತ್ತಿತ್ತು.
ಇದನ್ನೂ ಓದಿ : ಕೊನೆಗೂ ಕನಸು ನನಸು – ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್ ಕಿರೀಟ!







