ರೇಣುಕಾಸ್ವಾಮಿ ಕೊಲೆ ಕೇಸ್ – ನ.10ಕ್ಕೆ ವಿಚಾರಣೆ ಮುಂದೂಡಿಕೆ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ಮಾಡುವ ವಿಚಾರಣೆಯನ್ನು 64ನೇ ಸಿಸಿಎಚ್​ ನ್ಯಾಯಾಲಯ ನವೆಂಬರ್‌ 10ಕ್ಕೆ ಮುಂದೂಡಿದೆ.

ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ಇಂದು ಬೆಂಗಳೂರು 64ನೇ ಸಿಸಿಎಚ್​ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು.

ಆರೋಪಿಗಳು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಎಲ್ಲಾ ಆರೋಪಗಳನ್ನು ನಿರಾಕರಿಸಿದ ಹಿನ್ನೆಲೆ ಟ್ರಯಲ್ ಪ್ರಕ್ರಿಯೆ ಶುರುವಾಗಲಿದೆ. ನವೆಂಬರ್​ 10ರಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್​ ಆರಂಭವಾಗಲಿದೆ.

ನ್ಯಾಯಾಧೀಶ​ ಐಪಿ ನಾಯಕ್ ಅವರು ಪ್ರಕರಣದ ದೋಷಾರೋಪ ಪಟ್ಟಿಯನ್ನು ಓದಿದ್ದಾರೆ. ಎಲ್ಲಾ ಆರೋಪಿಗಳಿಗೂ ಜಡ್ಜ್ ಏಕಕಾಲಕ್ಕೆ ಆರೋಪಪಟ್ಟಿ ಓದಿ ಹೇಳಿದ್ದು, ಈ ವೇಳೆ ಆರೋಪಿಗಳು ನ್ಯಾಯಮೂರ್ತಿಗಳಿಗೆ ಇದೆಲ್ಲಾ ಸುಳ್ಳು ಎಂದು ಉತ್ತರಿಸಿದ್ದಾರೆ. ಈ ಹಿನ್ನಲೆ ದರ್ಶನ್‌ ಸೇರಿದಂತೆ 17 ಮಂದಿಯ ವಿಚಾರಣೆಯನ್ನು ಕೋರ್ಟ್‌ ನವೆಂಬರ್‌ 10ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಸ್ನೇಹಿತರಿಂದಲೇ ಸ್ನೇಹಿತನ ಬರ್ಬರ ಹತ್ಯೆ – ಕಲ್ಲಿನಿಂದ ಜಜ್ಜಿ ಯುವಕನ ಕೊಲೆ!

Btv Kannada
Author: Btv Kannada

Read More