ಬಿಲಾಸ್​ಪುರ ರೈಲು ಅಪಘಾತ – ಸಾವಿನ ಸಂಖ್ಯೆ 11ಕ್ಕೇರಿಕೆ, 20 ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ!

ಬಿಲಾಸ್​ಪುರ : ಛತ್ತೀಸ್​ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ. ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ರೆಡ್ ಸಿಗ್ನಲ್ ಅನ್ನು ಮೀರಿದ ನಂತರ ಪ್ಯಾಸೆಂಜರ್ ರೈಲು 60 ರಿಂದ 70 ಕಿ.ಮೀ ವೇಗದಲ್ಲಿ ಗೂಡ್ಸ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಗಾಯಗೊಂಡ ಪ್ರಯಾಣಿಕರನ್ನು ಬಿಲಾಸ್ಪುರದ ಅಪೋಲೋ ಆಸ್ಪತ್ರೆ ಮತ್ತು ಛತ್ತೀಸ್‌ಗಢ ವೈದ್ಯಕೀಯ ವಿಜ್ಞಾನ ಸಂಸ್ಥೆ (CIMS)ಗೆ ಸ್ಥಳಾಂತರಿಸಲಾಗಿದೆ.

ಮಂಗಳವಾರ (ನವೆಂಬರ್ 4) ಛತ್ತೀಸ್‌ಗಢದ ಬಿಲಾಸ್ಪುರ ನಿಲ್ದಾಣದ ಬಳಿ ಮುಖ್ಯ ವಿದ್ಯುತ್ ಮಲ್ಟಿಪಲ್ ಯೂನಿಟ್ (MEMU) ಸ್ಥಳೀಯ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಈ ರೈಲು ಅಪಘಾತ ಸಂಭವಿಸಿದೆ. ಅಪಾಯದ ಸಿಗ್ನಲ್‌ನಲ್ಲಿ ರೈಲನ್ನು ನಿಯಂತ್ರಿಸಲು ರೈಲು ಸಿಬ್ಬಂದಿ ವಿಫಲರಾಗಿದ್ದರು. ಇದರಿಂದ ರೈಲು ಕೆಂಪು ಸಿಗ್ನಲ್ ಅನ್ನು ದಾಟಿದೆ. ರೈಲುಗಳ ನಡುವೆ ಡಿಕ್ಕಿಯಾದ ನಂತರ ಮೋಟಾರ್ ಕೋಚ್ ಒಳಗೆ ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ಗಾಯಗೊಂಡಿರುವುದು ಕಂಡುಬಂದಿದೆ.

ಪ್ರಯಾಣಿಕ ರೈಲಿನ ಲೊಕೊ ಪೈಲಟ್ ವಿದ್ಯಾ ಸಾಗರ್ ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬರು. ಸಹಾಯಕ ಲೋಕೋ ಪೈಲಟ್ ಆದ ರಶ್ಮಿ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಪರಿಣಾಮವಾಗಿ ಇದುವರೆಗೆ 11 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಈ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಆರಂಭದಲ್ಲಿ ಎರಡರಿಂದ ಮೂರು ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ, ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ.

ಇದನ್ನೂ ಓದಿ : ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ – ಕೇಸ್ ದಾಖಲು!

Btv Kannada
Author: Btv Kannada

Read More