ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಮಸೂದೆ 2024ರಲ್ಲಿ ಚಿತ್ರರಂಗಕ್ಕೆ ಶೇಕಡ 2ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅದನ್ನು ಕನ್ನಡ ಚಿತ್ರರಂಗದ ಅನೇಕರು ಖಂಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಅವರು ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ, ಹ್ಯಾಸನಟ ಸಾಧುಕೋಕಿಲ ಅವರನ್ನು ಭೇಟಿ ಮಾಡಿದ್ದಾರೆ. ಸಾಧುಕೋಕಿಲ ಅವರನ್ನು ಭೇಟಿ ಮಾಡಿ, ಕನ್ನಡ ಚಲನಚಿತ್ರರಂಗಕ್ಕೆ ವಿಧಿಸಿರುವ ಸೆಸ್, ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕರಾದ ಎಂ ಜಿ ರಾಮಮೂರ್ತಿ, ರಮೇಶ್ ಯಾದವ್ ಸಾಥ್ ನೀಡಿದ್ದಾರೆ.
ಸರ್ಕಾರ ಅಂಗೀಕರಿಸಲು ಮುಂದಾಗಿರುವ ಈ ಮಸೂದೆಯಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಆದರೆ ಈಗಾಗಲೇ 637 ಥಿಯೇಟರ್ಗಳ ಪೈಕಿ 130 ಥಿಯೇಟರ್ಗಳು ಮುಚ್ಚುವ ಹಂತಕ್ಕೆ ಬಂದಿದೆ. ಜನ ಥಿಯೇಟರ್ನತ್ತ ಬರುತ್ತಿಲ್ಲ. ಇನ್ನು ಕರ್ನಾಟಕ ಸರ್ಕಾರವು ಸಿನಿಮಾ, ಒಟಿಟಿ ಸಬ್ಸ್ಕ್ರಿಪ್ಷನ್ ಮೇಲೆ ಶೇಕಡ 2ರಷ್ಟು ಸೆಸ್ ವಿಧಿಸಿದರೇ ಜನರನ್ನು ಥಿಯೇಟರ್ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ.
ಇದನ್ನೂ ಓದಿ : ರಾಜ್ಯಪಾಲರ ನೋಟಿಸ್ ಬೆನ್ನಲ್ಲೇ ಸಿಎಂ ಸಿದ್ದುಗೆ ಟೆನ್ಷನ್ – ಬ್ರೇಕ್ಫಾಸ್ಟ್ ಮೀಟಿಂಗ್ಗೂ ಮುನ್ನ ಆಪ್ತರ ಜೊತೆ ಚರ್ಚೆ..!