ವಿಜಯಪುರ : ಕಾಂಗ್ರೆಸ್ನವರು ಕೌರವರು, ರಾವಣನಂತೆ ವರ್ತಿಸುತ್ತಿದ್ದಾರೆ. ನೋಡುತ್ತೀರಿ, ಅಯೋಧ್ಯೆಯ ರಾಮ ಮಂದಿರದ ಬಳಿಕ ಹೊಸ ಹಿಂದೂ ಯುಗ ಆರಂಭ ಆಗುತ್ತದೆ.
ಆ ಮೂಲಕ ಸನಾತನ ಧರ್ಮ ವಿಶ್ವದಲ್ಲಿ ಪ್ರಸರಿಸುತ್ತದೆ. ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಕಾಂಗ್ರೆಸ್ ನಿಂದ ರಾಮ ಮಂದಿರ ಉದ್ಘಾಟನೆಗೆ ಹೋಗದಿರಲು ತೀರ್ಮಾನ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಾನು ಒಂದು ವೇಳೆ ಕಾಂಗ್ರೆಸ್ ಪಕ್ಷದಲ್ಲಿದ್ದಿದ್ರೆ ಹೈಕಮಾಂಡ್ ಆದೇಶ ಧಿಕ್ಕರಿಸಿ ರಾಮಮಂದಿರಕ್ಕೆ ಹೋಗುತ್ತಿದ್ದೆ.
ಆದರೆ ಕಾಂಗ್ರೆಸ್ನಲ್ಲಿ ಒಬ್ಬರಿಗೂ ಧೈರ್ಯ ಇಲ್ಲ. ಹೈಕಮಾಂಡ್ ಧಿಕ್ಕರಿಸಿ ರಾಮಮಂದಿರಕ್ಕೆ ಹೋಗುತ್ತೇವೆ ಎಂದು ಹೇಳಲು ಒಬ್ಬನಿಗೂ ಧೈರ್ಯವಿಲ್ಲ. ಕಾಂಗ್ರೆಸ್ನವರು ನಿಜವಾಗ್ಲೂ ರಾಮಭಕ್ತರಾಗಿದ್ರೆ ಹೋಗ್ತಾರೆ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಎದುರಾಳಿಯಾದರೆ ಒಳ್ಳೆಯದು : ಪ್ರತಾಪ್ ಸಿಂಹ..!
Post Views: 337