ಬೆಂಗಳೂರು : ಸಿಎಂ ಸಿದ್ದುಗೆ ‘ಮಗನೇ’ ಪದ ಬಳಕೆ ಮಾಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ದ್ವೇಷ ಭಾಷಣ, ಅಶಾಂತಿ ಮೂಡಿಸಲು ಯತ್ನ ಆರೋಪದಡಿ ಕುಮಟಾ ಪೊಲೀಸ್ ಠಾಣೆಯಲ್ಲಿ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.
IPC ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು, ) 153 (ಗಲಭೆಗೆ ಪ್ರಚೋದನೆ) ಅಡಿಯಲ್ಲಿ ಪೊಲೀಸರಿಂದ ಪ್ರಕರಣ ದಾಖಲಾಗಿದೆ.
ಸಂಸದ ಅನಂತ್ ಕುಮಾರ್ ಹೆಗಡೆ ದೇಗುಲ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗ ಮಾಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಸಂತರ ಶಾಪವಿತ್ತು ಎಂದು ಹೆಗಡೆ ಹೇಳಿದ್ದಾರೆ.
ಹಾಗಾಗಿ ಸಂಸದರ ವಿರುದ್ಧ ಕೇಸ್ ದಾಖಲಿಸುವಂತೆ ಕೈ ಮುಖಂಡರು ಒತ್ತಡ ಹಾಕಿದ್ದಾರೆ. ಅನಂತ್ಕುಮಾರ್ ಹೆಗಡೆ ಹೇಳಿಕೆ ವೈರಲ್ ಆಗ್ತಿದ್ದಂತೆ ಸುಮೋಟೋ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಕಲಬುರಗಿ : ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ..!