ಹಾಸನ : ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಆಚರಣೆ ಬಹಳ ಅದ್ದೂರಿಯಿಂದ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಮತ್ತು ಸದಸ್ಯ ಸೂರಜ್ ರೇವಣ್ಣ ಅವರು ಶಬರಿಮಲೆಗೆ ತೆರಳಿದ್ದಾರೆ. ಸಹೋದದರು ಅಯ್ಯಪ್ಪ ಮಾಲಾಧಾರಿಗಳಾಗಿ ಮಕರ ಸಂಕ್ರಾಂತಿ ದಿನವೇ ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಸಹೋದದರು ಮಾಲಾಧಾರಿಗಳಾಗಿ ದೇವರ ದರ್ಶನ ಮಾಡಿದ್ದು, ಶಬರಿಮಲೆ ಅಯ್ಯಪ್ಪ ದೇವಾಲಯ ಮುಂದೆ ಅಣ್ಣ-ತಮ್ಮ ಜೊತೆಯಾಗಿ ಫೋಟೋ ಕ್ಲಿಕ್ಕಿಸಿ ಕೊಂಡಿದ್ದಾರೆ. ಆ ಫೋಟೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ದೇವೇಗೌಡರ ಕುಟುಂಬದ ಎಲ್ಲ ಸದಸ್ಯರಂತೆ ಅಣ್ಣ ತಮ್ಮಂದಿರಾದ ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಅವರು ಕೂಡಾ ದೈವ ಭಕ್ತರಾಗಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅದಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿರುವ ನಡುವೆಯೇ ಶಬರಿಮಲೆ ಅಯ್ಯಪ್ಪ ದೇವರ ದರ್ಶನ ಮಾಡಿದ್ದಾರೆ.
ಇದನ್ನೂ ಓದಿ : ಹಾನಗಲ್ ಗ್ಯಾಂಗ್ ರೇ*ಪ್ ಕೇಸ್ – ಸಂತ್ರಸ್ತೆ ಕುಟುಂಬಸ್ಥರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ..!