ಚಿತ್ರದುರ್ಗ : ರಾಜ್ಯದಲ್ಲಿ ಮಾರಕ ಡೆಂಘೀಗೆ ಮತ್ತೊಂದು ಬಲಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 7 ವರ್ಷದ ಬಾಲಕ ಸಾವನ್ನಪ್ಪಿದ್ದು, ಈ ಮೂಲಕ ಕೋಟೆ ನಾಡಿನಲ್ಲಿ ಡೆಂಘೀ 2ನೇ ಬಲಿ ಪಡೆದಿದೆ.
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಹಿರಿಯೂರು ಮೇಟಿಕುರ್ಕೆಯ ಹನುಮಂತಪ್ಪ-ಕವಿತ ಪುತ್ರ 7 ವರ್ಷದ ಜಗನ್ನಾಥ ತೀವ್ರ ಜ್ವರದಿಂದ ಬಳಲುತ್ತಿದ್ದ. ಕಳೆದ 2 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಯಿಂದ ಮಾಹಿತಿ ಪಡೆದಿದ್ದಾರೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಡೆಂಘೀ ಜ್ವರ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ : ‘ಹೈ’ ಆತ್ಮವಿಶ್ವಾಸ.. ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ..!
Post Views: 40